ಬೆಂಗಳೂರಿನಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಸಾಕಷ್ಟು ಅನಾಹುತ ಸೃಷ್ಟಿಸಿದೆ. ನೀರು ಹರಿದು ಹೋಗಲು ಸೂಕ್ತ ಸ್ಥಳ ಇಲ್ಲದ ಕಾರಣ ಅಲ್ಲಲ್ಲಿ ನೀರು ನಿಂತು ಸಾರ್ವಜನಿಕರು ಪರದಾಡುತ್ತಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಮೈದಾನ ಕಂಠೀರವ ಸ್ಟೇಡಿಯಂ ಕೂಡ ನೀರಿನಿಂದ ತುಂಬಿದ್ದು, ಕ್ರೀಡಾಪಟುಗಳು ಅಭ್ಯಾಸ ಮಾಡಲಾಗದೆ ಅಸಹಾಯಕರಾಗಿದ್ದಾರೆ.