ಮಂಡ್ಯ ಬಳಿ ಕಾಮಗಾರಿ; ಹಲವು ರೈಲು ಸಂಚಾರ ರದ್ದು, ಪಟ್ಟಿ | Work Near Mandya South western Railway Cancelled Some Train List

Travel

oi-Gururaj S

|

Google Oneindia Kannada News

ಮಂಡ್ಯ, ಜುಲೈ 30; ನೈಋತ್ಯ ರೈಲ್ವೆ ಮಂಡ್ಯ ನಿಲ್ದಾಣ ಹತ್ತಿರದ ಕಾಮಗಾರಿಯನ್ನು ಕೈಗೊಂಡಿದೆ. ಆದ್ದರಿಂದ ಕೆಲವು ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ, ಕೆಲವು ರೈಲು ತಡವಾಗಿ ಸಂಚಾರ ನಡೆಸಲಿವೆ. ರೈಲು ಪ್ರಯಾಣಿಕರು ಈ ಕುರಿತು ಮಾಹಿತಿ ತಿಳಿಯುವುದು ಉತ್ತಮ.

ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ನೈಋತ್ಯ ರೈಲ್ವೆ, ಹುಬ್ಬಳ್ಳಿ ಅನೀಶ್ ಹೆಗಡೆ ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಮಂಡ್ಯ ನಿಲ್ದಾಣ ಹತ್ತಿರದ ಲೆವೆಲ್ ಕ್ರಾಸ್ ಗೇಟ್ ನಂ-73ರ ಕೆಳ ಸೇತುವೆ ಕಾಮಗಾರಿಯ ಸಲುವಾಗಿ ಕೆಲವು ಬದಲಾವಣೆ ಮಾಡಲಾಗಿದೆ.

ಹುಬ್ಬಳ್ಳಿ-ಬೆಂಗಳೂರು ವಿಶೇಷ ರೈಲು ಸೇವೆ ಅಕ್ಟೋಬರ್ ತನಕ ವಿಸ್ತರಣೆ ಹುಬ್ಬಳ್ಳಿ-ಬೆಂಗಳೂರು ವಿಶೇಷ ರೈಲು ಸೇವೆ ಅಕ್ಟೋಬರ್ ತನಕ ವಿಸ್ತರಣೆ

Work Near Mandya South western Railway Cancelled Some Train List

ಕೆಲವು ರೈಲುಗಳ ರದ್ದು ಮತ್ತು ಮಾರ್ಗ ಬದಲಾವಣೆ ಮಾಡಲಾಗುತ್ತಿದೆ. ಅವುಗಳ ಮಾಹಿತಿಯ ವಿವರಗಳು ಹೀಗಿವೆ. ಜುಲೈ 30 ರಿಂದ ಆಗಸ್ಟ್‌ 1 ರ ತನಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ.

Vande Bharat; ಬೆಂಗಳೂರು-ಧಾರವಾಡ ರೈಲು ಶೇ 85ರಷ್ಟು ಭರ್ತಿ Vande Bharat; ಬೆಂಗಳೂರು-ಧಾರವಾಡ ರೈಲು ಶೇ 85ರಷ್ಟು ಭರ್ತಿ

ರೈಲುಗಳ ರದ್ದು

* ರೈಲು ಸಂಖ್ಯೆ 06270 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮೈಸೂರು ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಜುಲೈ 30ರಂದು ರದ್ದುಗೊಳಿಸಲಾಗುತ್ತಿದೆ. ರೈಲು ಸಂಖ್ಯೆ 06268 ಮೈಸೂರು-ಅರಸೀಕೆರೆ ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಜುಲೈ 31ರಂದು ರದ್ದುಗೊಳಿಸಲಾಗುತ್ತಿದೆ.

Vande Bharat; ಬಳ್ಳಾರಿ-ಬೆಂಗಳೂರು ನಡುವೆ ರೈಲಿಗೆ ಬೇಡಿಕೆ Vande Bharat; ಬಳ್ಳಾರಿ-ಬೆಂಗಳೂರು ನಡುವೆ ರೈಲಿಗೆ ಬೇಡಿಕೆ

ರೈಲು ಸಂಖ್ಯೆ 06514 ಶಿವಮೊಗ್ಗ ಟೌನ್-ತುಮಕೂರು ವಿಶೇಷ ಡೆಮು ರೈಲನ್ನು ತಿಪಟೂರು ಮತ್ತು ತುಮಕೂರು ನಿಲ್ದಾಣಗಳ ನಡುವೆ ಆಗಸ್ಟ್ 1 ರಂದು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಪ್ರಕಟಣೆ ಹೇಳಿದೆ.

ಮಾರ್ಗ ಮಧ್ಯೆ ನಿಯಂತ್ರಣ

* ಜುಲೈ 30ರಂದು ಹುಬ್ಬಳ್ಳಿ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16591 ಎಸ್. ಎಸ್. ಎಸ್ ಹುಬ್ಬಳ್ಳಿ- ಮೈಸೂರು ದೈನಂದಿನ ಹಂಪಿ ಎಕ್ಸ್‌ಪ್ರೆಸ್‌ ರೈಲನ್ನು ಮಾರ್ಗ ಮಧ್ಯೆ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.

* ಜುಲೈ 30ರಂದು ಮೈಲಾಡುತುರೈ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16231 ಮೈಲಾಡುತುರೈ- ಮೈಸೂರು ದೈನಂದಿನ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.

* ಜುಲೈ 30ರಂದು ತಾಳಗುಪ್ಪ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16228 ತಾಳಗುಪ್ಪ-ಮೈಸೂರು ದೈನಂದಿನ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 45 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.

* ಜುಲೈ 30ರಂದು ತಿರುಪತಿ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16220 ತಿರುಪತಿ-ಚಾಮರಾಜನಗರ ದೈನಂದಿನ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 90 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.

* ಜುಲೈ 30ರಂದು ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16021 ಡಾ ಎಂ. ಜಿ. ಆರ್ ಚೆನ್ನೈ ಸೆಂಟ್ರಲ್-ಮೈಸೂರು ದೈನಂದಿನ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 120 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.

ಕೆಲವು ರೈಲುಗಳು ರದ್ದು/ ಮಾರ್ಗ ಮಧ್ಯ ನಿಯಂತ್ರಣ

ತುಮಕೂರು-ಅರಸೀಕೆರೆ ಭಾಗದ ಹೆಗ್ಗೆರೆ ನಿಲ್ದಾಣದ ಪಾದಾಚಾರಿಗಳ ಮೇಲ್ಸೇತುವೆ ಕಾಮಗಾರಿ ಸಲುವಾಗಿ ಆಗಸ್ಟ್ 1ರಂದು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ ಕೆಲವು ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ.

ಆಗಸ್ಟ್ 1ರಂದು ತುಮಕೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 06512 ತುಮಕೂರು-ಬಾಣಸವಾಡಿ ಡೆಮು ವಿಶೇಷ ರೈಲು 120 ನಿಮಿಷ ಕಾಲ ತಡವಾಗಿ ಪ್ರಾರಂಭವಾಗಲಿದೆ.

ಆಗಸ್ಟ್ 1ರಂದು ತುಮಕೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16567 ತುಮಕೂರು-ಶಿವಮೊಗ್ಗ ಟೌನ್‌ ಡೈಲಿ ವಿಶೇಷ ಎಕ್ಸ್‌ಪ್ರೆಸ್ ರೈಲು 15 ನಿಮಿಷ ಕಾಲ ತಡವಾಗಿ ಪ್ರಾರಂಭವಾಗಲಿದೆ.

ರೈಲು ಸಂಖ್ಯೆ 12089 ಕೆ. ಎಸ್. ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಜನಶತಾಬ್ದಿ ಎಕ್ಸ್‌ಪ್ರೆಸ್‌ ರೈಲನ್ನು ಆಗಸ್ಟ್ 1ರಂದು ಮಾರ್ಗ ಮಧ್ಯ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.

English summary

South western railway cancelled some train and changed the timings due to work near Mandya railway station. Here are the list.

Source link