ಮುಂದುವರೆದ ವರ್ಗಾವಣೆ ಪರ್ವ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ | Karnataka Government Transfers 14 IAS Officers

Karnataka

oi-Naveen Kumar N

|

Google Oneindia Kannada News

ಸಕಾಲ ಮಿಷನ್‌ನ ಹೆಚ್ಚುವರಿ ಮಿಷನ್ ನಿರ್ದೇಶಕರಾಗಿ ನೇಮಕಗೊಂಡ ಪಲ್ಲವಿ ಅಕುರಾತಿ ಸೇರಿದಂತೆ ಹತ್ತು ಐಎಎಸ್ ಅಧಿಕಾರಿಗಳನ್ನು ಕರ್ನಾಟಕ ಸರ್ಕಾರ ವರ್ಗಾವಣೆ ಮಾಡಿದ ನಂತರ ಕೇವಲ ಎರಡು ದಿನಗಳ ನಂತರ ರಾಜ್ಯ ಸರ್ಕಾರ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಐಎಎಸ್ (ವೇತನ) ನಿಯಮಗಳು, 2016 ರ 12 ರ ಅಡಿಯಲ್ಲಿ ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ನಿರ್ದೇಶಕರ ಕೇಡರ್ ಹುದ್ದೆಗೆ ಸಮಾನವಾದ ಸ್ಥಾನಮಾನ ಮತ್ತು ಜವಾಬ್ದಾರಿಗಳಲ್ಲಿ ಹೊಸ ಹುದ್ದೆಗಳನ್ನು ಘೋಷಿಸಲಾಗಿದೆ. ಜೂನ್ 19, 2023ರ ಆದೇಶದಂತೆ ವರ್ಗಾವಣೆ ಮಾಡಲಾಗಿದೆ.

Government Transfers 14 IAS Officers

ಈ ಆದೇಶಕ್ಕೂ ಕೆಲ ಸಮಯ ಮೊದಲು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿತ್ತು. ಉಸ್ತುವಾರಿ ವಹಿಸಿದ ಜಿಲ್ಲೆಗಳಿಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿ ಯೋಜನೆಗಳ ಸ್ಥಿತಿಗತಿ, ಪರಿಣಾಮದ ಬಗ್ಗೆ ಸರ್ಕಾರಕ್ಕೆ ಪ್ರಗತಿ ವರದಿ ಸಲ್ಲಿಸುವ ಜವಾಬ್ದಾರಿಯನ್ನು ಉಸ್ತುವಾರಿ ಕಾರ್ಯದರ್ಶಿಗಳಿಗೆ ನೀಡಲಾಗಿದೆ.

 ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 170 ಪೊಲೀಸ್ ಸಿಬ್ಬಂದಿ ವರ್ಗಾವಣೆ, ಏಕೆ?, ಇಲ್ಲಿದೆ ವಿವರ ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 170 ಪೊಲೀಸ್ ಸಿಬ್ಬಂದಿ ವರ್ಗಾವಣೆ, ಏಕೆ?, ಇಲ್ಲಿದೆ ವಿವರ

ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳ ಪಟ್ಟಿ:

1) ಬಿ.ಸಿ.ಸತೀಶ್, ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
2) ಡಾ.ಹೆಚ್.ಎನ್.ಗೋಪಾಲಕೃಷ್ಣ, ಜೆಡಿ, ಮುನ್ಸಿಪಲ್ ಡಾಟಾ ಸೊಸೈಟಿ
3) ಜಾವೇದ್ ಅಖ್ತರ್, ಎಸಿಎಸ್, ಆರೋಗ್ಯ ಇಲಾಖೆ (ವೈದ್ಯಕೀಯ ಶಿಕ್ಷಣ)
4) ಅಕ್ರಂ ಪಾಷಾ, ಜಿಲ್ಲಾಧಿಕಾರಿ, ಕೋಲಾರ
5) ಎನ್.ಎಂ.ನಾಗರಾಜ್, ಯೋಜನಾ ನಿರ್ದೇಶಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ
6) ಡಾ.ಎನ್.ಶಿವಶಂಕರ, ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
7) ಆರ್‌.ಲತಾ, ಕಾರ್ಯದರ್ಶಿ, ರಾಜ್ಯ ಮಹಿಳಾ ಆಯೋಗ
8) ಗಂಗೂಬಾಯಿ ರಮೇಶ್ ಮಾನಕರ್, ಕಾರ್ಯದರ್ಶಿ, ರಾಜ್ಯ ಮಾಹಿತಿ ಆಯೋಗ
9) ಫೌಝಿಯಾ ತರನುಮ್, ಜಿಲ್ಲಾಧಿಕಾರಿ, ಕಲಬುರಗಿ
10) ವೆಂಕಟರಾಜು, ಜಿಲ್ಲಾಧಿಕಾರಿ, ಕೊಡಗು
11) ಭನ್ವರ್ ಸಿಂಗ್ ಮೀನಾ, ಸಿಇಒ, ಕಲಬುರಗಿ ಜಿಲ್ಲಾ ಪಂಚಾಯಿತಿ
12) ಡಾ.ಗಿರೀಶ್ ದಿಲೀಪ್ ಬಾಡೊಲೆ, ಪರೀಕ್ಷಾ ನಿಯಂತ್ರಕ, ಕೆಪಿಎಸ್​ಸಿ
13) ಜಿ.ಲಿಂಗಮೂರ್ತಿ, ವ್ಯವಸ್ಥಾಪಕ ನಿರ್ದೇಶಕ, ಕೆಆರ್​ಡಿಸಿಎಲ್
14) ನೊಂಗ್ಜಾಯ್ ಮೊಹಮ್ಮದ್ ಅಲಿ‌ ಅಕ್ರಂ ಶಾ-ಆಯುಕ್ತ, ಹಂಪಿ‌ ವಿಶ್ವ ಹೆರಿಟೇಜ್ ಏರಿಯಾ ನಿರ್ವಹಣಾ ಪ್ರಾಧಿಕಾರ

English summary

After the Karnataka government transferred and posted ten IAS officers, including Pallavi Akurathi as the Additional Mission Director of Sakala Mission, just two days later, the state government has issued orders for the transfer and posting of 14 additional IAS officers.

Source link