India
oi-Punith BU
ನವದೆಹಲಿ, ಜೂನ್ 28: ವಾರಣಾಸಿಯಿಂದ ದೆಹಲಿಗೆ ಬರುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಫಿರೋಜಾಬಾದ್ ಜಿಲ್ಲೆಯ ಜಲೇಸರ್ ಪಟ್ಟಣ ಮತ್ತು ಪೋರಾ ಗ್ರಾಮದ ನಡುವೆ ತುಂಡ್ಲಾ ಬಳಿ ವ್ಯಕ್ತಿಯೊಬ್ಬರು ವಂದೇ ಭಾರತ್ ರೈಲಿಗೆ ಸಿಲುಕಿ ಮೃತರಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಇದು ಅತಿಕ್ರಮ ಪ್ರವೇಶ ಪ್ರಕರಣ ಎನ್ನಲಾಗಿದೆ.
ಮಂಗಳವಾರ ಮುಂಜಾನೆ ಪ್ರಧಾನಿ ಮೋದಿ ಅವರು ಪ್ರವಾಸಿ ಪಟ್ಟಣಗಳು ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಪ್ರಮುಖ ನಗರಗಳನ್ನು ಸಂಪರ್ಕಿಸುವ ಐದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು.
ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶಕ್ಕೆ ವರ್ಷಾಂತ್ಯದ ವೇಳೆಗೆ ವಿಧಾನಸಭೆ ಚುನಾವಣೆ ನಡೆಯಲಿದೆ. ಮೋದಿ ಅವರು ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನ ರಾಣಿ ಕಮಲಾಪತಿ ರೈಲು ನಿಲ್ದಾಣದಿಂದ ದೇಶದ ವಿವಿಧ ಐದು ರೈಲುಗಳಿಗೆ ಏಕಕಾಲಿಕ್ಕೆ ಚಾಲನೆ ನೀಡಿದರು. ಈ ಮೂಲಕ ಗೋವಾ, ಬಿಹಾರ ಮತ್ತು ಜಾರ್ಖಂಡ್ಗಳು ಮೊದಲ ವಂದೇ ಭಾರತ್ ರೈಲನ್ನು ಪಡೆದವು.
ಈ ವೇಳೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯ್ ಪಟೇಲ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುಧಾರಿತ ವೈಶಿಷ್ಟ್ಯಗಳೊಂದಿಗೆ ಸುಸಜ್ಜಿತವಾದ ನೀಲಿ ಮತ್ತು ಬಿಳಿ ಬಣ್ಣದ ಅಲ್ಟ್ರಾ ಮಾಡರ್ನ್ ರೈಲುಗಳಿಗೆ ಚಾಲನೆ ನೀಡುವ ಮೊದಲು, ಮೋದಿ ಅವುಗಳಲ್ಲಿ ಒಂದರಲ್ಲಿ ವಿದ್ಯಾರ್ಥಿಗಳು ಮತ್ತು ಅದರ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು. ರಾಣಿ ಕಮಲಾಪತಿ (ಭೋಪಾಲ್)-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್ ಮಧ್ಯಪ್ರದೇಶದ ಮಹಾಕೌಶಲ್ ಪ್ರದೇಶವನ್ನು (ಜಬಲ್ಪುರ) ಮಧ್ಯ ಪ್ರದೇಶಕ್ಕೆ (ಭೋಪಾಲ್) ಸಂಪರ್ಕಿಸುತ್ತದೆ. ಮಧ್ಯಪ್ರದೇಶದ ಎರಡನೇ ಸೆಮಿ-ಹೈ ಸ್ಪೀಡ್ ಎರಡು ನಗರಗಳ ನಡುವೆ ಗಂಟೆಗೆ 130 ಕಿಮೀ ವೇಗದಲ್ಲಿ ಕಾರ್ಯನಿರ್ವಹಿಸುತ್ತದೆ. ಈಗಾಗಲೇ ಇಲ್ಲಿ ಸಂಚರಿಸುತ್ತಿರುವ ವೇಗದ ರೈಲಿಗೆ ಹೋಲಿಸಿದರೆ ರೈಲು ಸುಮಾರು ಮೂವತ್ತು ನಿಮಿಷಗಳಷ್ಟು ವೇಗವಾಗಿ ಸಂಚರಿಸುತ್ತದೆ.
Vande Bharat Express: ಥರ್ಮಕೋಲ್, ಫ್ಲೈವುಡ್ನಿಂದ ವಂದೇ ಭಾರತ್ ರೈಲು ತಯಾರಿ: ಕಲಾವಿದನ ಕೈಚಳಕಕ್ಕೆ ಜನ ಫಿದಾ
ಮಧ್ಯಪ್ರದೇಶದ ಮೂರನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ರಾಜ್ಯದ ಮಾಲ್ವಾ ಪ್ರದೇಶ (ಇಂಧೋರ್), ಬುಂದೇಲ್ಖಂಡ್ ಪ್ರದೇಶ (ಖಜುರಾಹೊ) ಮತ್ತು ಮಧ್ಯ ಪ್ರದೇಶ (ಭೋಪಾಲ್) ನಡುವೆ ಕಾರ್ಯನಿರ್ವಹಿಸುತ್ತದೆ. ಮಹಾಕಾಳೇಶ್ವರ, ಮಂಡು, ಮಹೇಶ್ವರ, ಖಜುರಾಹೊ, ಪನ್ನಾ ಮುಂತಾದ ಪ್ರವಾಸಿ ತಾಣಗಳಿಗೆ ಈ ರೈಲು ಪ್ರಯೋಜನವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ರೈಲು ಮಾರ್ಗದಲ್ಲಿ ಅಸ್ತಿತ್ವದಲ್ಲಿರುವ ವೇಗದ ರೈಲಿಗಿಂತ ಸುಮಾರು ಎರಡು ಗಂಟೆ ಮೂವತ್ತು ನಿಮಿಷಗಳ ವೇಗದಲ್ಲಿ ತಲುಪುತ್ತದೆ.
ಮುಂಬೈ-ಮಡ್ಗಾಂವ್ (ಗೋವಾ) ವಂದೇ ಭಾರತ್ ಎಕ್ಸ್ಪ್ರೆಸ್- ಇದು ಗೋವಾದ ಮೊದಲ ವಂದೇ ಭಾರತ್ ರೈಲು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮತ್ತು ಗೋವಾದ ಮಡಗಾಂವ್ ನಿಲ್ದಾಣದ ನಡುವೆ ಕಾರ್ಯನಿರ್ವಹಿಸುತ್ತದೆ. ಶುಕ್ರವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ರೈಲು ಕಾರ್ಯನಿರ್ವಹಿಸಲಿದೆ. ರೈಲು ಮಾರ್ಗದಲ್ಲಿ ಪ್ರಸ್ತುತ ಇರುವ ರೈಲುಗಳಿಗೆ ಹೋಲಿಸಿದರೆ ಸುಮಾರು ಒಂದು ಗಂಟೆ ಪ್ರಯಾಣದ ಸಮಯವನ್ನು ಉಳಿಸುವ ನಿರೀಕ್ಷೆಯಿದೆ. ಒಡಿಶಾ ದುರಂತದ ನಂತರ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ವಂದೇ ಭಾರತ್ ರೈಲಿನ ಲೋಕಾರ್ಪಣೆಯನ್ನು ರದ್ದುಗೊಳಿಸಿತ್ತು.
ಕರ್ನಾಟಕದ ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಧಾರವಾಡ, ಹುಬ್ಬಳ್ಳಿ ಮತ್ತು ದಾವಣಗೆರೆಯಂತಹ ಪ್ರಮುಖ ನಗರಗಳನ್ನು ರಾಜ್ಯ ರಾಜಧಾನಿ ಬೆಂಗಳೂರಿನೊಂದಿಗೆ ಸಂಪರ್ಕಿಸುತ್ತದೆ. ಈ ಮಾರ್ಗದಲ್ಲಿ ಸಂಚರಿಸುವ ಅತಿ ವೇಗದ ರೈಲಿಗೆ ಹೋಲಿಸಿದರೆ ರೈಲು ಸುಮಾರು ಮೂವತ್ತು ನಿಮಿಷಗಳಷ್ಟು ವೇಗವಾಗಿರುತ್ತದೆ. ಇದು ಕರ್ನಾಟಕಕ್ಕೆ ಎರಡನೇ ವಂದೇ ಭಾರತ್ ರೈಲು ಆಗಿದ್ದು, ಮೊದಲನೆಯದು ಚೆನ್ನೈ, ಬೆಂಗಳೂರು ಮತ್ತು ಮೈಸೂರು ನಡುವೆ ಓಡುತ್ತದೆ.
ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ ಜಾರ್ಖಂಡ್ ಮತ್ತು ಬಿಹಾರಕ್ಕೆ ಮೊದಲ ವಂದೇ ಭಾರತ್ ಆಗಿರುತ್ತದೆ. ಪಾಟ್ನಾ ಮತ್ತು ರಾಂಚಿ ನಡುವಿನ ಸಂಪರ್ಕವನ್ನು ಹೆಚ್ಚಿಸುವ ರೈಲು ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಿಗೆ ವರದಾನವಾಗಲಿದೆ. ಎರಡು ಸ್ಥಳಗಳನ್ನು ಸಂಪರ್ಕಿಸುವ ಪ್ರಸ್ತುತ ವೇಗದ ರೈಲಿಗೆ ಹೋಲಿಸಿದರೆ ಇದು ಸುಮಾರು ಒಂದು ಗಂಟೆ ಇಪ್ಪತ್ತೈದು ನಿಮಿಷಗಳ ಪ್ರಯಾಣದ ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ ಎಂದು ಪ್ರಕಟಣೆ ತಿಳಿಸಿದೆ.
English summary
Vande Bharat Express train coming from Varanasi to Delhi collided with one person and died.
Story first published: Wednesday, June 28, 2023, 11:37 [IST]