PTI
ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ನಿರ್ಣಾಯಕ ಹಂತ ತಲುಪಿದ್ದು, ಮಹಾ ನೂತನ ಮುಖ್ಯಮಂತ್ರಿಯಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂದೆ ಅವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಜುಲೈ 2 ರಿಂದ ಎರಡು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗಿದೆ.
ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅಧಿಕಾರ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ: ಮಹಾರಾಷ್ಟ್ರ: ನೂತನ ಸಿಎಂ ಆಗಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ
ಅಧಿವೇಶನದ ಮೊದಲ ದಿನವಾದ ಶನಿವಾರ ವಿಧಾನಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ. ನಾನಾ ಪಟೋಲೆ ರಾಜೀನಾಮೆಯಿಂದ ಸ್ಪೀಕರ್ ಸ್ಥಾನ ತೆರವಾಗಿದ್ದ, ಆ ಸ್ಥಾನಕ್ಕೆ ಜುಲೈ 2 ರಂದು ಚುನಾವಣೆ ನಡೆಯಲಿದೆ ಮತ್ತು ಅಂದೇ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಿಶ್ವಾಸಮತ ಯಾಚಿಸುವ ಸಾಧ್ಯತೆ ಇದೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App