Online Desk
ಬೆಂಗಳೂರು: ಕೊಲಂಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಫ್ ನಲ್ಲಿ ಬೆಳ್ಳಿ ಗೆದ್ದ ಕರ್ನಾಟಕದ ಪ್ರಿಯಾ ಮೋಹನ್ ಒಳಗೊಂಡ ಭಾರತೀಯ ರಿಲೇ ತಂಡಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕದ ಪ್ರಿಯಾ ಮೋಹನ್ , ಭರತ್, ಶ್ರೀಧರ್, ರೂಪಾಲ್ ಚೌಧರಿ ಮತ್ತು ಕಪಿಲ್ ಅವರನ್ನೊಳಗೊಂಡ ಮಿಶ್ರ ರಿಲೇ ತಂಡ ಉತ್ತಮ ಪ್ರದರ್ಶನ ತೋರಿಸಿದ್ದು, ಕೂದಲೆಳೆ ಅಂತರದಲ್ಲಿ ಚಿನ್ನದ ಪದಕ ಕೈ ತಪ್ಪಿದೆ. ಕಳೆದ ವರ್ಷ ಕಂಚಿನ ಪದಕದ ಸಾಧನೆ ಮಾಡಿದ್ದ ಭಾರತದ ರಿಲೇ ತಂಡ ಈ ಬಾರಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದೆ. ಸ್ವಲ್ಪದರಲ್ಲಿ ಚಿನ್ನದ ಪದಕ ಕೈ ತಪ್ಪಿದ್ದು, ಮುಂದಿನ ಸಲ ಚಿನ್ನದ ಪದಕ ಗೆಲ್ಲುವ ವಿಶ್ವಾಸವಿದ್ದು, ಅತ್ಯುತ್ತಮ ಸಾಧನೆ ಮಾಡಿರುವ ರಿಲೇ ತಂಡಕ್ಕೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.
ಭಾರತ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಪ್ರಿಯಾ ಮೋಹನ್ ಅವರಿಗೆ 5 ಲಕ್ಷ ರೂ. ನಗದು ಪುರಸ್ಕಾರ ನೀಡುವುದಾಗಿ ಸಚಿವ ಡಾ. ಕೆ. ಸಿ. ನಾರಾಯಣಗೌಡ ಅವರು ಘೋಷಿಸಿದ್ದಾರೆ.
State government announces Rs 5 lakh to Priya Mohan who was part of Indian Mixed Relay team that won silver at U-20 World Athletics Championship. Congratulations#WorldU20 #Athletics
1/2 pic.twitter.com/VPDsdTYk7n
— Dr. Narayana Gowda / ಡಾ.ನಾರಾಯಣ ಗೌಡ (@narayanagowdakc) August 3, 2022
For more news update stay with actp news
Android App
Facebook
Twitter
Dailyhunt
Share Chat
Telegram
Koo App