The New Indian Express
ಬೆಂಗಳೂರು: ಉದ್ಯಾನನಗರಿಯ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವಕ್ಕೆ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಮುಖ್ಯ ಆಕರ್ಷಣೆ.
ಕೋವಿಡ್-19 ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳ ಕಾಲ ರದ್ದಾಗಿದ್ದ ಫಲಪುಷ್ಪ ಪ್ರದರ್ಶನ ಈ ವರ್ಷ ಮತ್ತೆ ಆರಂಭವಾಗಿದೆ. ಇಂದು ಲಾಲ್ ಬಾಗ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು. ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಹೆಸರಿನಲ್ಲಿ ಈ ಬಾರಿ ಪುಷ್ಪ ಪ್ರದರ್ಶನ ನಡೆಯುತ್ತಿರುವುದು ವಿಶೇಷ.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಗೌರವವನ್ನು ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ನೀಡಲಾಗುವುದು ಎಂದು ಪ್ರಕಟಿಸಿದರು.
ನವೆಂಬರ್ 1ರಂದು ಕರ್ನಾಟಕ ರತ್ನ ನೀಡಲು ತಯಾರಿ ಮಾಡಲಿದ್ದು, ಇದಕ್ಕಾಗಿ ಸಣ್ಣ ಸಮಿತಿ ರಚನೆ ಮಾಡಿದ್ದೇವೆ. ಆ ದಿನ ರಾಜ್ ಕುಮಾರ್ ಕುಟುಂಬ ಉಪಸ್ಥಿತವಿರುತ್ತದೆ ಎಂದರು.
After 2 years Covid break, Lal Bagh Flower Show returns. CM Bommai announced that, on Nov 1st Puneeth Rajkumar will he honoured Karnataka Ratha posthumously. @XpressBengaluru,@NewIndianXpress,@BoskyKhanna,@AshwiniMS_TNIE,@Ashwini_PRK,@CMofKarnataka,@BSBommai,@Cloudnirad pic.twitter.com/jRe6t2o02Q
— Mohammed Yacoob (@yacoobExpress) August 5, 2022
ಪುಷ್ಪ ಪ್ರದರ್ಶನ: ಇಂದಿನಿಂದ ಆಗಸ್ಟ್ 15ವರೆಗೆ ಪುಷ್ಪ ಪ್ರದರ್ಶನ ನಡೆಯಲಿದ್ದು, ಪುನೀತ್ ರಾಜ್ ಕುಮಾರ್ ಪರಿಕಲ್ಪನೆಯಲ್ಲಿ ವಿನ್ಯಾಸ ಮಾಡಲಾಗಿದ್ದು, 2.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಟಿಕೆಟ್ ದರ 70 ರೂಪಾಯಿಗಳಿದ್ದರೆ, ವಾರಂತ್ಯದಲ್ಲಿ 75 ರೂಪಾಯಿಗಳನ್ನು ನಿಗದಿಪಡಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಹೇಳಿದ್ದಾರೆ.
ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳಿಗೆ ಈ ಪ್ರದರ್ಶನ ಉಚಿತವಾಗಿರಲಿದೆ.
Lalbagh Flower show returns after two years COVID barke @CMofKarnataka inaugurated on Friday @XpressBengaluru @AshwiniMS_TNIE @KannadaPrabha @santwana99 @shrirambn @vinodkumart5 @ramupatil_TNIE @Cloudnirad @BoskyKhanna pic.twitter.com/VcEzBJUNIB
— Nagaraja Gadekal (@gadekal2020) August 5, 2022
For more news update stay with actp news
Android App
Facebook
Twitter
Dailyhunt
Share Chat
Telegram
Koo App