English Tamil Hindi Telugu Kannada Malayalam Google news Android App
Tue. Mar 28th, 2023

The New Indian Express

ಮೈಸೂರು: ಪಿಎಫ್‌ಐ ಸೇರಿದಂತೆ ಪಾಕ್ ಬೆಂಬಲಿಸುವ ಸಂಸ್ಥೆಗಳನ್ನು ನಿಷೇಧಿಸಬೇಕು ಎಂಬುವವರಲ್ಲಿ ನಾನು ಒಬ್ಬ, ಇಂತಹ ಸಂಘಟನೆಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಶುಕ್ರವಾರ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಎಸ್‌ಡಿಪಿಐ, ಕೆಎಫ್‌ಡಿ ಮತ್ತು ಪಿಎಫ್‌ಐ ಸೇರಿದಂತೆ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರ ಹಿಂಜರಿಯುವುದಿಲ್ಲ, ಕೇಂದ್ರ ಸರ್ಕಾರವೂ ಇದೇ ನಿಲುವು ಹೊಂದಿದೆ. ಆದರೆ ಒಂದು ಸಂಸ್ಥೆ ಬ್ಯಾನ್ ಮಾಡಿದರೇ ಮತ್ತೊಂದು ಹೆಸರಲ್ಲಿ ಬರುತ್ತಾರೆ. ಆದ್ದರಿಂದ ಅವರ ಲೀಡರ್‌ಗಳ ಮಾಹಿತಿ ಪಡೆದು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಬ್ಯಾನ್ ಮಾಡಲಾಗುವುದು ಎಂದರು.

ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಆ ಸಂಘಟನೆ ಕಾರ್ಯಕರ್ತರ ವಿರುದ್ಧ 200ಕ್ಕೂ ಹೆಚ್ಚು ಕೇಸ್‌ಗಳನ್ನು ಹಾಕಲಾಗಿತ್ತು. ಬಳಿಕ‌ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎಲ್ಲಾ ಕೇಸ್‌ಗಳನ್ನು ಹಿಂತೆಗೆದುಕೊಂಡಿತ್ತು. ಅದರ ಪ್ರತಿಫಲ ಈಗ ಅನುಭವಿಸುತ್ತಿದ್ದೇವೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಟಿಪ್ಪು ಸುಲ್ತಾನ್ ಎಂದರೆ ಸಾಕು ಸಿದ್ದರಾಮಯ್ಯ ಮೈಮೇಲೆ ಬಂದಂಗೆ ಆಡ್ತಾರೆ: ಅಶೋಕ್ ಹೇಳಿಕೆಗೆ ಸಿದ್ದು ಪ್ರತಿಕ್ರಿಯೆ

ನಾನು ಗೃಹ ಸಚಿವನಾಗಿದ್ದ ವೇಳೆ ಈ ಸಂಘಟನೆಗಳ ನಿಷೇಧಕ್ಕೆ ಕ್ರಮ ಕೈಗೊಂಡಿದ್ದಲ್ಲದೆ ಕೇಂದ್ರದ ಜತೆ ಮಾತುಕತೆಯನ್ನೂ ನಡೆಸಿದ್ದೆ,  ಕೇರಳ ಸರ್ಕಾರ ಕೂಡ ಈ ಸಂಘಟನೆಗಳನ್ನು ನಿಷೇಧಿಸಲು ಬಯಸುತ್ತದೆ, ಆದರೆ ಇದು ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published. Required fields are marked *