Online Desk
ಬೆಂಗಳೂರು: ದಂತ ವೈದ್ಯೆ ಮತ್ತು ಆಕೆಯ ಮಗಳ ಮೃತದೇಹ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮೃತ ದಂತ ವೈದ್ಯೆಯನ್ನು 39 ವರ್ಷದ ಶೈಮಾ ಹಾಗೂ ಮಗಳು 10 ವರ್ಷದ ಆರಾಧನ ಎಂದು ಗುರುತಿಸಲಾಗಿದೆ. ಬನಶಂಕರಿಯ ಕಾವೇರಿನಗರದ ಮನೆಯೊಂದರಲ್ಲಿ ಘಟನೆ ನಡೆದಿದೆ. ಇನ್ನು ಘಟನಾ ಸ್ಥಳಕ್ಕೆ ಬನಶಂಕರಿ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಕಳ್ಳನನ್ನು ಕೊಲೆ ಮಾಡಿದ್ದ ತಂದೆ, ಮಗನ ಬಂಧನ
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ. ಹೀಗಾಗಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಶೈಮಾ ಕೊಡಗಿನ ಮೂಲದವರಾಗಿದ್ದು 10 ವರ್ಷಗಳ ಹಿಂದೆ ಕೋಲಾರ ಮೂಲದ ವೈದ್ಯ ನಾರಾಯಣ್ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App