English Tamil Hindi Telugu Kannada Malayalam Google news Android App
Tue. Mar 28th, 2023

PTI

ಪಾಟ್ನ: ಬಿಹಾರದಲ್ಲಿ ಬಿಜೆಪಿ-ಜೆಡಿಯು ನಡುವಿನ ಮೈತ್ರಿ ಮುರಿದುಬಿದ್ದಿದ್ದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿ ಬಿಜೆಪಿಗೆ ತೀವ್ರ ಹಿನ್ನೆಡೆಯುಂಟಾಗಿದೆ.
 
ಮೂಲಗಳ ಪ್ರಕಾರ ಸೋಮವಾರ ರಾತ್ರಿ ಖುದ್ದು ಅಮಿತ್ ಶಾ ನಿತೀಶ್ ಕುಮಾರ್ ಗೆ ಕರೆ ಮಾಡಿ 6 ನಿಮಿಷಗಳ ಕಾಲ ಮಾತನಾಡಿದ್ದರು. 

ಇದನ್ನೂ ಓದಿ: ಬಿಹಾರದಲ್ಲಿ ರಾಜಕೀಯ ಹೈಡ್ರಾಮಕ್ಕೆ ತೆರೆ: ಬಿಜೆಪಿಯೊಂದಿಗಿನ ಮೈತ್ರಿ ಮುರಿದ ಜೆಡಿಯು

ನಿತೀಶ್ ಕುಮಾರ್ ಅವರನ್ನು ಎನ್ ಡಿಎ ಮೈತ್ರಿಕೂಟದಲ್ಲೇ ಮುಂದುವರೆಯುವಂತೆ ಮನವಿ ಮಾಡಿದ್ದರು ಅಷ್ಟೇ ಅಲ್ಲದೇ 2025 ವರೆಗೂ ನೀವೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೀರಿ ಎಂಬ ಭರವಸೆಯನ್ನೂ ನೀಡಿದ್ದರು. ಆದರೆ ಇದ್ಯಾವುದಕ್ಕೂ ನಿತೀಶ್ ಕುಮಾರ್ ಮನವೊಲಿಕೆಯಾಗಲಿಲ್ಲ. ರೀಡಿಫ್.ಕಾಮ್ ನ ವರದಿಯ ಪ್ರಕಾರ, ಈಗ ಬಿಜೆಪಿಯಿಂದ ಹೊರಬಂದಿರುವ ನಿತೀಶ್ ಕುಮಾರ್ ಗೆ ಆರ್ ಜೆಡಿ, ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆರ್ ಜೆಡಿ ಮೂಲಗಳ ಪ್ರಕಾರ ಮಹಾಘಟಬಂಧನ್ 2.0 ಸರ್ಕಾರ ರಚನೆಯಾಗಲಿದ್ದು, ಶೀಘ್ರವೇ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬೀಳಲಿದೆ.ಜೆಡಿಯು ಸಂಸದರು, ಶಾಸಕರ ಸಭೆಯಲ್ಲಿ ನಿತೀಶ್ ಕುಮಾರ್ ಯಾವುದೇ ನಿರ್ಧಾರ ಕೈಗೊಂಡರೂ ಬದ್ಧ ಎಂದು ಶಾಸಕರು, ಸಂಸದರು ಹೇಳಿದ್ದರು.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published. Required fields are marked *