ANI
ಹೈದರಾಬಾದ್(ತೆಲಂಗಾಣ): ಇಲ್ಲಿನ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿಗಳು ಅವರ ನಿವಾಸಕ್ಕೆ ಹೋಗಿ ನೋಡುವಾಗ ಪತ್ತೆಯಾಗಿತ್ತು.
ನಿನ್ನೆ ಸೋಮವಾರ ಬೆಳಗ್ಗೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಿಯಾಪುರ್ ಪೊಲೀಸ್ ಠಾಣೆಗೆ ಫೋನ್ ಕರೆ ಬಂದಿತ್ತು.
ತಕ್ಷಣವೇ ಪೊಲೀಸ್ ಅಧಿಕಾರಿಗಳ ಒಂದು ತಂಡ ಸ್ಥಳಕ್ಕೆ ಧಾವಿಸಿ ನೋಡಿದಾಗ ತಮ್ಮ ನಿವಾಸದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಯಿತು. ಅವರು ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಎಂದು ಗೊತ್ತಾಗಿದ್ದು ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಲಿಲ್ಲ.
ಕೆಲದಿನಗಳಿಂದ ಜ್ಞಾನೇಂದ್ರ ಪ್ರಸಾದ್ ತಮ್ಮ ಪೆಂಟ್ ಹೌಸ್ ನಲ್ಲಿ ವಾಸವಾಗಿದ್ದರು ಎಂದು ಪೊಲೀಸರಿಗೆ ತನಿಖೆಯಲ್ಲಿ ಗೊತ್ತಾಗಿದೆ. ಶವವನ್ನು ನಂತರ ಸ್ಥಳೀಯ ಆಸ್ಪತ್ರೆಗೆ ಶವಪರೀಕ್ಷೆಗೆ ವರ್ಗಾಯಿಸಲಾಯಿತು. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App