The New Indian Express
ಚೆನ್ನೈ: ಉಚಿತ ಯೋಜನೆಗಳನ್ನು ಘೋಷಿಸುವ ರಾಜಕೀಯ ಪಕ್ಷಗಳ ನೋಂದಣಿ ರದ್ದುಗೊಳಿಸುವ ಅಂಶ ‘ಪ್ರಜಾಪ್ರಭುತ್ವ ವಿರೋಧಿ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
“ನೋಂದಣಿ ರದ್ದುಪಡಿಸುವಿಕೆಯ ಅಂಶವನ್ನು ನಾನು ಪರಿಶೀಲಿಸಲು ಬಯಸುವುದಿಲ್ಲ. ಅದು ಪ್ರಜಾಪ್ರಭುತ್ವ ವಿರೋಧಿ ಕ್ರಮ. ನಮ್ಮದು ಪ್ರಜಾಪ್ರಭುತ್ವ” ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನ್ವಿ ರಮಣ ಹೇಳಿದ್ದಾರೆ.
ಚುನಾವಣಾ ಪ್ರಚಾರದ ಸಮಯದಲ್ಲಿ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳ ಭರವಸೆ ನೀಡಲು ಅನುಮತಿ ನೀಡದಂತೆ ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.
ಇದನ್ನು ಓದಿ: ಉಚಿತ ಶಿಕ್ಷಣ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ವಿರೋಧಿ ವಾತಾವರಣ ಸೃಷ್ಟಿಸಲಾಗುತ್ತಿದೆ: ಕೇಜ್ರಿವಾಲ್
“ಪ್ರಶ್ನೆ ಏನೆಂದರೆ, ಈಗ ನಾವು ಇದರಲ್ಲಿ ಎಷ್ಟರ ಮಟ್ಟಿಗೆ ಮಧ್ಯಪ್ರವೇಶಿಸಬಹುದು ಅಥವಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು? ಕಾರಣ ಇಸಿಐ ಇದೆ, ಅದು ಸ್ವತಂತ್ರ ಸಂಸ್ಥೆಯಾಗಿದೆ ಮತ್ತು ರಾಜಕೀಯ ಪಕ್ಷಗಳು ಇವೆ. ಎಲ್ಲರೂ ಇದ್ದಾರೆ. ಅದು ಎಲ್ಲ ಜನರ ಬುದ್ಧಿವಂತಿಕೆ. ಇದು ಖಂಡಿತವಾಗಿಯೂ ಕಾಳಜಿ ಮತ್ತು ಆರ್ಥಿಕ ಶಿಸ್ತಿನ ಸಮಸ್ಯೆ. ಆದರೆ ಬಡತನವಿರುವ ಭಾರತದಂತಹ ದೇಶದಲ್ಲಿ ನಾವು ಆ ಸಮಸ್ಯೆಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ಸಿಜೆಐ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್, ಇಂತಹ ಉಚಿತ ಘೋಷಣೆಗಳನ್ನು ಮುಂದುವರಿಸಿದರೆ, ಈ ಪ್ರಕ್ರಿಯೆಯು ದೇಶವನ್ನು ಆರ್ಥಿಕ ವಿನಾಶದತ್ತ ಕೊಂಡೊಯ್ಯುತ್ತದೆ ಎಂದು ಹೇಳಿದರು. ಸರ್ಕಾರ ಈ ಬಗ್ಗೆ ಕಾನೂನು ತರುವವರೆಗೆ ನ್ಯಾಯಾಲಯ ಮಧ್ಯಪ್ರವೇಶಿಸಿ ಮಾರ್ಗಸೂಚಿಗಳನ್ನು ನಿರ್ಧರಿಸಬಹುದು ಎಂದು ಸಾಲಿಸಿಟರ್ ಜನರಲ್ ಹೇಳಿದರು.
ವಾದ, ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಿದೆ.
For more news update stay with actp news
Android App
Facebook
Twitter
Dailyhunt
Share Chat
Telegram
Koo App