The New Indian Express
ಮೈಸೂರು: ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಸೂಪರ್ ಪವರ್ ದೇಶವನ್ನಾಗಿ ಪರಿವರ್ತಿಸಲು ಯುವಕರು ಕೊಡುಗೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.
ಅವರು ನಿನ್ನೆ ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ಬೃಹತ್ ಯುವಜನಸತ್ವವನ್ನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಂದಿನ 25 ವರ್ಷಗಳು ದೇಶ ಮತ್ತು ಕರ್ನಾಟಕ ಎರಡಕ್ಕೂ ಸುವರ್ಣ ವರ್ಷವಾಗಿರಲಿದೆ ಎಂದರು.
‘ನವ ಕರ್ನಾಟಕ’ ನಿರ್ಮಾಣಕ್ಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಘೋಷಿಸಿದ ಅವರು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದರು. “ರಾಜ್ಯಗಳ ಮರುಸಂಘಟನೆಯ ನಂತರ, ಕರ್ನಾಟಕವು ತನ್ನ ಎಲ್ಲಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ 5-ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸಿನ ಪೈಕಿ ರಾಜ್ಯವು 1.5 ಟ್ರಿಲಿಯನ್ ಡಾಲರ್ ಗುರಿಯನ್ನು ಹೊಂದಿದೆ ಎಂದರು.
ಇದನ್ನೂ ಓದಿ: ದೊಡ್ಡ ದೊಡ್ಡ ಕನಸು ಕಟ್ಟಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಯಶ್ ಸಲಹೆ
ಮೈಸೂರು ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ, ಬೇಲೂರು, ಹಳೇಬೀಡು, ಮೈಸೂರು ಭಾಗಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಇತರ ಪ್ರಮುಖ ತಾಣಗಳನ್ನು ಒಳಗೊಂಡ ಪ್ರವಾಸೋದ್ಯಮ ಸರ್ಕ್ಯೂಟ್ಗೆ ತಮ್ಮ ಸರ್ಕಾರ ಹಣ ಘೋಷಿಸಿದೆ ಎಂದು ಹೇಳಿದರು.
ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಚಿತ್ರದುರ್ಗ ಸೇರಿದಂತೆ ಇನ್ನಿತರೆ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮಾನಸಗಂಗೋತ್ರಿ ಆವರಣದಲ್ಲಿ ಸಾವಿರ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ಶತಮಾನದಷ್ಟು ಹಳೆಯದಾದ ಮಹಾರಾಜ ಮತ್ತು ಮಹಾರಾಣಿ ಕಾಲೇಜುಗಳ ನವೀಕರಣಕ್ಕೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದರು.
For more news update stay with actp news
Android App
Facebook
Twitter
Dailyhunt
Share Chat
Telegram
Koo App