ನಿರ್ಮಲ್ ಜಿಲ್ಲೆಯ ಕುಂತಲ ಮಂಡಲದ ಕಲ್ಲೂರು ಗ್ರಾಮದ ಸಾಯಿಬಾಬಾ ದೇವಸ್ಥಾನದ ಬಳಿ ಗುರುವಾರ ಶಾಲಾ ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ. ಅದಿಲಾಬಾದ್: ನಿರ್ಮಲ್ ಜಿಲ್ಲೆಯ ಕುಂತಲ ಮಂಡಲದ ಕಲ್ಲೂರು ಗ್ರಾಮದ ಸಾಯಿಬಾಬಾ ದೇವಸ್ಥಾನದ ಬಳಿ ಗುರುವಾರ ಶಾಲಾ ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಆದಿಲಾಬಾದ್ ಮೂಲದ ಖಾಸಗಿ ಸಂಸ್ಥೆಯ ಶಾಲಾ ಬಸ್ ಬಸರ ಸರಸ್ವತಿ ದೇವಸ್ಥಾನದಿಂದ ಕಲ್ಲೂರು ಸಾಯಿಬಾಬಾ ದೇವಸ್ಥಾನದ ಕಡೆಗೆ ಚಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆ ನಡೆದಾಗ ಬಸ್ ನಲ್ಲಿ 56 ಮಂದಿ ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್'ನ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಮಕ್ಕಳನ್ನು ಚಿಕಿತ್ಸೆಗಾಗಿ ಭೈಂಸಾ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಇಬ್ಬರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿದ ನಂತರ, ಎಲ್ಲಾ ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿ ಮತ್ತೊಂದು ವಾಹನದಲ್ಲಿ ಆದಿಲಾಬಾದ್ಗೆ ತೆರಳಿದರು. ಈ ಸಂಬಂಧ ಶಾಲೆಯ ಸಿಬ್ಬಂದಿ ಯಾವುದೇ ಪೊಲೀಸ್ ದೂರು ನೀಡಿಲ್ಲ ಎಂದು ತಿಳಿದುಬಂದಿದೆ. <img src="https://media.kannadaprabha.com/uploads/user/imagelibrary/2022/12/2/w600X390/Accident2.jpg" alt="ಶಾಲಾ ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಾಯ" title="ಶಾಲಾ ಬಸ್ ಮೇಲೆ ವಿದ್ಯುತ್ ತಂತಿ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಾಯ"
For more news update stay with actp news
Android App
Facebook
Twitter
Dailyhunt
Share Chat
Telegram
Koo App