English Tamil Hindi Telugu Kannada Malayalam Google news Android App
Fri. Mar 24th, 2023

Online Desk

ಮೆಲ್ಬೋರ್ನ್: ಮೆಲ್ಬೋರ್ನ್‌ನಲ್ಲಿರುವ ಶ್ರೀ ಶಿವ ವಿಷ್ಣು ದೇವಾಲಯವನ್ನು ಖಲಿಸ್ತಾನಿ ಬೆಂಬಲಿಗರು ಧ್ವಂಸಗೊಳಿಸಿರುವುದಕ್ಕೆ ಆಸ್ಟ್ರೇಲಿಯಾದ ಭಾರತೀಯ ರಾಯಭಾರಿ ಮನ್‌ಪ್ರೀತ್ ವೋಹ್ರಾ ಅವರು ಮಂಗಳವಾರ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

ದೇವಾಲಯಕ್ಕೆ ಭೇಟಿ ನೀಡಿದ ಅವರು, ಖಲಿಸ್ತಾನಿಗಳ ದಾಳಿ ಕುರಿತು ಖಂಡನೆ ವ್ಯಕ್ತಪಡಿಸಿದ್ದಾರೆ. ಪ್ರಾರ್ಥನೆ ಸಲ್ಲಿಸುವ ಸ್ಥಳವನ್ನು ಯಾವಾಗಲೂ ಎಲ್ಲಾ ಸಮುದಾಯಗಳು ಮತ್ತು ನಂಬಿಕೆಗಳು ಗೌರವಿಸುತ್ತವೆ ಎಂದು ಹೇಳಿದ್ದಾರೆ.

“ಎಲ್ಲಾ ಸಮುದಾಯಗಳು ಮತ್ತು ನಂಬಿಕೆಗಳಿಂದ ಯಾವಾಗಲೂ ಪೂಜಿಸಲ್ಪಡುವ ಆರಾಧನಾ ಸ್ಥಳವಾದ ಮೆಲ್ಬೋರ್ನ್‌ನಲ್ಲಿರುವ ಐತಿಹಾಸಿಕ ಶ್ರೀ ಶಿವ ವಿಷ್ಣು ದೇವಾಲಯಕ್ಕೆ ಭೇಟಿ ನೀಡಿದೆ. ದೇವಾಲಯದಲ್ಲಿ ಖಲಿಸ್ತಾನಿ ಪರ ಅಂಶಗಳಿಂದ ಕೂಡಿದ ದ್ವೇಷ ತುಂಬಿದ ಗೀಚುಬರಹಗಳು ಕಂಡು ಬಂದಿದ್ದು, ಇಂದು ಖಂಡನೀಯವಾದದ್ದು. ಅವರ ಈ ಪ್ರಯತ್ನಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.

ಕ್ಯಾರಮ್ ಡೌನ್ಸ್‌ನಲ್ಲಿರುವ ಶಿವ ವಿಷ್ಣು ದೇವಾಲಯದ ಮೇಲೆ ಈ ಹಿಂದೆ ಖಲಿಸ್ತಾನಿ ಬೆಂಬಲಿರು ದಾಳಿ ನಡೆಸಿದ್ದರು. ಇದಾದ ಕೆಲ ದಿನಗಳ ಬಳಿಕ ಮೆಲ್ಬೋರ್ನ್‌ನಲ್ಲಿರುವ ಆಲ್ಬರ್ಟ್ ಪಾರ್ಕ್‌ನಲ್ಲಿ ಹಿಂದೂ ದೇವಸ್ಥಾನವನ್ನು ಕೆಡವಿದ್ದರು. ಭಾರತ ವಿರೋಧಿ ಬರಹದೊಂದಿಗೆ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದರು. ಇದು 11 ದಿನಗಳಲ್ಲಿ ಹಿಂದೂ ದೇವಾಲಯಗಳ ಮೇಲೆ ನಡೆದ 3ನೇ ದಾಳಿಯಾಗಿತ್ತು.

ದೇವಾಲಯಗಳ ದಾಳಿಗಳ ಬಳಿಕ ಖಲಿಸ್ತಾನಿಗಳ ಬೆಂಬಲಿಗರು ಭಾರತೀಯರ ಮೇಲೂ ದಾಳಿ ನಡೆಸಿದ್ದರು, ಖಲಿಸ್ತಾನಿಗಳ ಬೆಂಬಲಿಗರ ಗುಂಪೊಂದು ಭಾನುವಾರ ಭಾರತದ ತ್ರಿವರ್ಣ ಧ್ವಜ ಹಿಡಿದಿದ್ದ ಭಾರತೀಯರ ಮೇಲೆ ದಾಳಿ ನಡೆಸಿದ್ದರು. ದಾಳಿಯಲ್ಲಿ ಐದು ಮಂದಿ ಗಾಯಗೊಂಡಿದ್ದರು.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published. Required fields are marked *