Kangana Ranaut: ಉದಯನಿಧಿ ಸ್ಟಾಲಿನ್ ಬಂಧನ ಸರಿಯಾದ ಕ್ರಮ; ತ್ರಿಶಾ ಪರ ಕಂಗನಾ ಬ್ಯಾಟಿಂಗ್ | | ACTPnews

ಉದಯನಿಧಿ ಸ್ಟಾಲಿನ್


Last Updated:

ತಮಿಳುನಾಡಿನ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಉದಯನಿಧಿ ಸ್ಟಾಲಿನ್ (Udhayanidhi Stalin) ಬಂಧನ ಪ್ರಕರಣದ ಕುರಿತು ಇದೀಗ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಪ್ರತಿಕ್ರಿಯೆ ನೀಡಿದ್ದಾರೆ.

ಉದಯನಿಧಿ ಸ್ಟಾಲಿನ್
ಉದಯನಿಧಿ ಸ್ಟಾಲಿನ್

ತಮಿಳುನಾಡಿನ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಉದಯನಿಧಿ ಸ್ಟಾಲಿನ್ (Udhayanidhi Stalin) ಬಂಧನ ಪ್ರಕರಣದ ಕುರಿತು ಇದೀಗ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ (Trisha Krishnan) ಕುರಿತು ಸಾರ್ವಜನಿಕ ಸಭೆಯಲ್ಲಿ ನೀಡಲಾಗಿದೆ ಎನ್ನಲಾದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿದ್ದ ಕ್ರಮವನ್ನು ಕಂಗನಾ ಸಮರ್ಥಿಸಿಕೊಂಡಿದ್ದು, ನಾಗರಿಕ ಸಮಾಜದಲ್ಲಿ ಇಂತಹ ವರ್ತನೆಗೆ ಅವಕಾಶ ಇರಬಾರದು ಎಂದು ಖಡಕ್ ಸಂದೇಶ ನೀಡಿದ್ದಾರೆ.

ಕಂಗನಾ ಹೇಳಿದ್ದೇನು?

ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪ್ರತಿಕ್ರಿಯಿಸಿರುವ ಕಂಗನಾ ರಣಾವತ್, ಸಾರ್ವಜನಿಕ ವೇದಿಕೆಗಳಲ್ಲಿ ಅಸಭ್ಯ ಹಾಗೂ ದ್ವಂದ್ವಾರ್ಥದ ಮಾತುಗಳನ್ನು ಆಡಬಾರದು ಎಂದು ಹೇಳಿದ್ದಾರೆ. ಸಾರ್ವಜನಿಕವಾಗಿ ಅಸಭ್ಯ ಮಾತುಗಳನ್ನು ಆಡುವುದು ಅಥವಾ ದ್ವಂದ್ವಾರ್ಥದ ಅಶ್ಲೀಲ ಜೋಕ್‌ಗಳನ್ನು ಮಾಡುವುದು ಯಾವುದೇ ನಾಗರಿಕ ಸಮಾಜ ಒಪ್ಪುವಂತಹದ್ದು ಅಲ್ಲ. ಈ ಆರೋಪದ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿತ್ತು. ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿರಬಹುದು. ಆದರೂ ಬಂಧನದ ಕ್ರಮವು ಉತ್ತಮ ನಿರ್ಧಾರವಾಗಿದ್ದು, ಇಂತಹ ಘಟನೆಗಳಿಗೆ ಎಚ್ಚರಿಕೆಯ ಸಂದೇಶವಾಗಿದೆ ಎಂದು ಕಂಗನಾ ಬರೆದುಕೊಂಡಿದ್ದಾರೆ.

ಏನಿದು ವಿವಾದ?

ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಂಜಾವೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್, ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ವೇಳೆ ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಕೃಷ್ಣನ್ ಅವರ ಹೆಸರನ್ನು ಕೂಗಿದಾಗ, ಅದಕ್ಕೆ ಪ್ರತಿಕ್ರಿಯೆಯಾಗಿ ಅವರು ದ್ವಂದ್ವಾರ್ಥದ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತು.

ಪ್ರಕರಣ ದಾಖಲಾದ ಬಳಿಕ ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ವಶಕ್ಕೆ ಪಡೆದಿದ್ದರು. ನಂತರ ನ್ಯಾಯಾಲಯದ ನಿರ್ದೇಶನದಂತೆ ವಿಚಾರಣೆ ಪೂರ್ಣಗೊಂಡ ಬಳಿಕ ಅವರಿಗೆ ಜಾಮೀನು ನೀಡಲಾಯಿತು. ಬಂಧನ ಮತ್ತು ಬಿಡುಗಡೆ ಎರಡೂ ತಮಿಳುನಾಡು ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ.

ಒಟ್ಟಾರೆಯಾಗಿ ಕಂಗನಾ ರಣಾವತ್ ಅವರ ಪ್ರತಿಕ್ರಿಯೆಯ ಬಳಿಕ ಈ ಪ್ರಕರಣ ಮತ್ತೊಮ್ಮೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಬಂದಿದೆ. ಒಂದು ಕಡೆ ಉದಯನಿಧಿ ವಿರುದ್ಧ ಕಾನೂನು ಕ್ರಮವನ್ನು ಬೆಂಬಲಿಸುವವರು ಇದ್ದರೆ, ಮತ್ತೊಂದೆಡೆ ಅವರ ಬಂಧನವನ್ನು ರಾಜಕೀಯ ಪ್ರೇರಿತ ಎಂದು ಟೀಕಿಸುವವರೂ ಇದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರಿದಿದ್ದು, ಮುಂದಿನ ಬೆಳವಣಿಗೆಗಳತ್ತ ರಾಜಕೀಯ ಹಾಗೂ ಸಿನಿ ವಲಯದ ಗಮನ ನೆಟ್ಟಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed