Last Updated:
ವಿದೇಶಾಂಗ ಸಚಿವಾಲಯವೂ (MEA) ಈ ದಾಳಿಯನ್ನು ಖಂಡಿಸಿದೆ. “ ಆಗಸ್ಟ್ 4, 2026ರಂದು ಯೆಮೆನ್ ಕರಾವಳಿಯ ಬಳಿ ಕೆಂಪು ಸಮುದ್ರದಲ್ಲಿ ಭಾರತೀಯ ಧ್ವಜ ಹೊಂದಿದ್ದ ವಾಣಿಜ್ಯ ಹಡಗು ಎಂಎಸ್ವಿ ಫೈಜ್ ನೂರ್ ಒಲಿಯಾ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ. ಎಲ್ಲಾ 13 ಭಾರತೀಯ ನಾಗರಿಕರನ್ನು ರಕ್ಷಿಸಲಾಗಿದೆ” ಎಂದು ಹೇಳಿಕೆ ನೀಡಿದೆ.
ಯೆಮೆನ್ ಕರಾವಳಿಯಲ್ಲಿ ಕೆಂಪು ಸಮುದ್ರದಲ್ಲಿ (Red Sea) ಇಂದು ಭಾರತೀಯ ಧ್ವಜವನ್ನು ಹೊಂದಿದ್ದ ವಾಣಿಜ್ಯ ಹಡಗು ಎಂಎಸ್ವಿ ಫೈಜ್ ನೂರ್ ಒಲಿಯಾ (MSV Faize Noore Oliya) ಮೇಲೆ ದಾಳಿ ನಡೆದಿದೆ. ಸ್ಫೋಟಕಗಳಿಂದ ತುಂಬಿದ ದೋಣಿಯೊಂದು ಹಡಗಿಗೆ ಡಿಕ್ಕಿಹೊಡೆದ ಪರಿಣಾಮ ಸ್ಫೋಟ ಸಂಭವಿಸಿದ್ದು, ಹಡಗು ಮುಳುಗಡೆಯಾಗಿದೆ. ಹಡಗಿನಲ್ಲಿದ್ದ ಎಲ್ಲಾ 13 ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಭಾರತೀಯ ವಿದೇಶಾಂಗ ಸಚಿವಾಲಯ (Ministry of External Affairs) ದಾಳಿಯನ್ನು ಬಲವಾಗಿ ಖಂಡಿಸಿದ್ದು, ಯೆಮೆನ್ ಅಧಿಕಾರಿಗಳ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.
ರಿಯಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಂತರರಾಷ್ಟ್ರೀಯ ಜಲಮಾರ್ಗಗಳಲ್ಲಿ ವಾಣಿಜ್ಯ ಹಡಗುಗಳ ಮೇಲೆ ನಡೆಯುತ್ತಿರುವ ದಾಳಿಗಳು ಅತ್ಯಂತ ಕಳವಳಕಾರಿ ಎಂದು ಭಾರತ ಬಣ್ಣಿಸಿದ್ದು, ಅವುಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಅಡೆತಡೆಯಿಲ್ಲದ ಸಂಚಾರವನ್ನು ಪುನಃಸ್ಥಾಪಿಸಬೇಕು ಎಂದು ಒತ್ತಾಯಿಸಿದೆ.
ಯೆಮೆನ್ನ ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ ಜಂಟಿ ಕಾರ್ಯಾಚರಣೆಯಲ್ಲಿ ಎಲ್ಲರನ್ನೂ ರಕ್ಷಿಸಿ ಮೊಖಾ ಬಂದರಿಗೆ ಕರೆತಂದಿದ್ದಾರೆ. ಯಾರಿಗೂ ಗಾಯವಾಗಿಲ್ಲ. ಇದುವರೆಗೆ ಯಾವುದೇ ಗುಂಪು ಈ ದಾಳಿಗೆ ಜವಾಬ್ದಾರಿ ಹೊತ್ತಿಲ್ಲ ಎಂದು ತಿಳಿದುಬಂದಿದೆ.
ಕೇಂದ್ರ ಸಮುದ್ರ ಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ಇದನ್ನು “ಅಪ್ರಚೋದಿತ ದಾಳಿ” ಎಂದು ಕರೆದು ತೀವ್ರವಾಗಿ ಖಂಡಿಸಿದ್ದಾರೆ. “ಭಾರತದ ಎಂಎಸ್ವಿ ಫೈಜ್ ನೂರ್ ಒಲಿಯಾ ಹಡಗಿಗೆ ಯೆಮೆನ್ ಕರಾವಳಿ ಪ್ರದೇಶದಲ್ಲಿ ಸ್ಫೋಟಕ ತುಂಬಿದ ಲ್ಯಾಡನ್ ಬೋಟ್ ಹೊಡೆದಿದೆ. ಹಡಗು ತಲೆಕೆಳಗಾಗಿ ಮುಳುಗಿದೆ. ನಿರಾಯುಧ ವಾಣಿಜ್ಯ ಹಡಗಿನ ಮೇಲಿನ ಈ ಅಪ್ರಚೋದಿತ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ” ಎಂದು ತಿಳಿಸಿದ್ದಾರೆ.
ಮುಂದುವರಿಸಿ, “ ನಮ್ಮ ನಾಗರಿಕರ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಎಲ್ಲಾ 14 ನಾವಿಕರು (13 ಭಾರತೀಯರು ಸೇರಿ) ಯೆಮೆನ್ ಕೋಸ್ಟ್ ಗಾರ್ಡ್ನಿಂದ ಸುರಕ್ಷಿತವಾಗಿ ರಕ್ಷಿಸಲ್ಪಟ್ಟು ಮೊಖಾ ಬಂದರಿಗೆ ತಲುಪಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.
ಅವರು ಡೈರೆಕ್ಟರ್ ಜನರಲ್ ಮ್ಯಾರಿಟೈಮ್ ಅಡ್ಮಿನಿಸ್ಟ್ರೇಷನ್ಗೆ (DGMA) ತಕ್ಷಣ ಎಲ್ಲಾ ಏಜೆನ್ಸಿಗಳೊಂದಿಗೆ ಸಂಪರ್ಕ ಸಾಧಿಸಿ ಭಾರತೀಯ ನಾವಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ವಿದೇಶಾಂಗ ಸಚಿವಾಲಯವೂ (MEA) ಈ ದಾಳಿಯನ್ನು ಖಂಡಿಸಿದೆ. “ ಆಗಸ್ಟ್ 4, 2026ರಂದು ಯೆಮೆನ್ ಕರಾವಳಿಯ ಬಳಿ ಕೆಂಪು ಸಮುದ್ರದಲ್ಲಿ ಭಾರತೀಯ ಧ್ವಜ ಹೊಂದಿದ್ದ ವಾಣಿಜ್ಯ ಹಡಗು ಎಂಎಸ್ವಿ ಫೈಜ್ ನೂರ್ ಒಲಿಯಾ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ. ಎಲ್ಲಾ 13 ಭಾರತೀಯ ನಾಗರಿಕರನ್ನು ರಕ್ಷಿಸಲಾಗಿದೆ” ಎಂದು ಹೇಳಿಕೆ ನೀಡಿದೆ.
ರಿಯಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ ಮತ್ತು ಯೆಮೆನ್ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸುತ್ತಿದೆ. ಯೆಮೆನ್ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಾಚರಣೆಗಾಗಿ ಧನ್ಯವಾದ ಅರ್ಪಿಸಿದೆ.
ಸಚಿವಾಲಯವು ಪ್ರದೇಶದಲ್ಲಿ ವಾಣಿಜ್ಯ ಹಡಗುಗಳ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಆತಂಕ ವ್ಯಕ್ತಪಡಿಸಿದೆ. “ಈ ಪ್ರದೇಶದಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳು ತೀವ್ರ ಚಿಂತೆ ಉಂಟುಮಾಡುತ್ತಿವೆ. ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳು ನಿಲ್ಲಬೇಕು. ಅಂತರರಾಷ್ಟ್ರೀಯ ಕಾನೂನಿನ ಪ್ರಕಾರ ಅಂತರರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಕ್ತ ಮತ್ತು ನಿರಂತರ ನಾವಿಕಾಯಾನ ಹಾಗೂ ವಾಣಿಜ್ಯವನ್ನು ಪುನಃಸ್ಥಾಪಿಸಬೇಕು” ಎಂದು ಒತ್ತಾಯಿಸಿದೆ.
ಇದು ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿಗೆ ನಡೆದ ಮೊದಲ ತಿಳಿದಿರುವ ದಾಳಿ. ಈ ಘಟನೆಯಿಂದ ಭಾರತೀಯ ನಾವಿಕರ ಸುರಕ್ಷತೆ ಕುರಿತು ಸರ್ಕಾರ ಎಚ್ಚರಿಕೆಯನ್ನು ಹೆಚ್ಚಿಸಿದೆ.
Aug 04, 2026 11:27 PM IST














