Last Updated:
ರಾಜ್ಯಸಭೆಯಲ್ಲಿ ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರೇ ಈ ವಿಚಾರವನ್ನು ಪ್ರಸ್ತಾಪಿಸಿ ತೀವ್ರ ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ನಾಯಕರು ಕೂಡ ಅಸಮಾಧಾನ ಹೊರಹಾಕಿದ್ದಾರೆ.
ಉತ್ತರಾಖಂಡ್ನ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರ ಸಮಾವೇಶದ ನಂತರ ನಡೆದ ‘ಶುದ್ಧೀಕರಣ’ (ಹವನ) ಪೂಜೆಯ ವಿವಾದ ಈಗ ಸಂಸತ್ತಿನವರೆಗೂ ತಲುಪಿ, ದೇಶಾದ್ಯಂತ ದೊಡ್ಡ ರಾಜಕೀಯ (Politics) ಬಿರುಗಾಳಿಯನ್ನೇ ಎಬ್ಬಿಸಿದೆ. ದಲಿತ ಸಮುದಾಯದ ಪ್ರಮುಖ ನಾಯಕರಾಗಿರುವ ಖರ್ಗೆ ಅವರ ಭಾಷಣದ ನಂತರ ವೇದಿಕೆಯನ್ನು ‘ಶುದ್ಧೀಕರಣ’ ಮಾಡಲಾಗಿದೆ ಎಂಬ ಆರೋಪ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳ ಬಗ್ಗೆ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಈ ಕುರಿತು ರಾಜ್ಯಸಭೆಯಲ್ಲಿ ನಡೆದ ಕಾವೇರಿದ ಚರ್ಚೆ ಮತ್ತು ನಾಯಕರ ವಾದ-ಪ್ರತಿವಾದದ ಸಂಪೂರ್ಣ ಮಾಹಿತಿ ಇಲ್ಲಿದೆ.














