Last Updated:
ಜಿರಳೆ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ, ವಿದ್ಯಾರ್ಥಿಗಳು ಮತ್ತು ಯುವಕರು ನೀಟ್-ಯುಜಿ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ದೆಹಲಿಯ ಐತಿಹಾಸಿಕ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯ ಸಮಯದಲ್ಲಿ ವಿದ್ಯಾರ್ಥಿಗಳು ಹಲವಾರು ಬೇಡಿಕೆಗಳನ್ನು ಮುಂದಿಟ್ಟರು. ಆದರೆ ಈಗ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಆಮ್ ಆದ್ಮಿ ಪಕ್ಷದೊಂದಿಗಿನ ಸಂಬಂಧದಿಂದ ಸುದ್ದಿಯಲ್ಲಿದ್ದಾರೆ.
ಕೇಂದ್ರ ಸಚಿವ ಕಿರಣ್ ರಿಜಿಜು ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ (Abhijeet Dipke) ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೀಪ್ಕೆ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತ, ಹಾಗಾದರೆ ಅವರು ಹೇಗೆ ವಿದ್ಯಾರ್ಥಿಯಾದರು ಎಂದು ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiran Rijiju) ಮಂಗಳವಾರ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಯನ್ನು ಗುರಿಯಾಗಿಸಿಕೊಂಡು, ಆಮ್ ಆದ್ಮಿ ಪಕ್ಷ (ಎಎಪಿ) ಯೊಂದಿಗೆ ಸಂಬಂಧ ಹೊಂದಿರುವ ಕಾರ್ಯಕರ್ತ ಮತ್ತು ತಮ್ಮನ್ನು ತಾವು ವಿದ್ಯಾರ್ಥಿ ನಾಯಕ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.














