Last Updated:
ಸಚಿವ ರಾಜ್ನಾಥ್ ಸಿಂಗ್ ಅವರ ಲಡಾಖ್ ಭೇಟಿಯನ್ನು ಯಾವ ಕಾರಣಕ್ಕಾಗಿ ಮುಂದೂಡಲಾಗಿದೆ ಎಂದು ಸರ್ಕಾರದ ವಲಯದಿಂದ ಈವರೆಗೆ ಯಾವುದೇ ಸ್ಪಷ್ಟತೆ ದೊರಕಿಲ್ಲ. ಆದರೆ, ಜೂನ್ 6, 22 ಹಾಗೂ 30 ರಂದು ಎರಡೂ ದೇಶದ ಕಮಾಂಡರ್ ಮಟ್ಟದಲ್ಲಿ ಮೂರು ಸುತ್ತಿನ ಮಾತುಕತೆ ನಡೆದಿದೆ. ಗಡಿಯಲ್ಲಿ ಶಾಂತಿ ಸ್ಥಾಪಿಸುವ ಕುರಿತು ಎರಡೂ ದೇಶಗಳು ಒಪ್ಪಿಗೆ ಸೂಚಿಸಿವೆ.
ಲಡಾಖ್(ಜು.03): ಭಾರತ-ಚೀನಾ ನಡುವಿನ ಸಂರ್ಘದ ನಂತರ ಇಲ್ಲಿನ ಪರಿಸ್ಥಿತಿ ಅವಲೋಕಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬದಲಿಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಲಡಾಖ್ಗೆ ಭೇಟಿ ನೀಡುತ್ತಿದ್ಧಾರೆ. ಇಂದು ಲಾಡಾಖ್ಗೆ ಭೇಟಿ ನೀಡಿ ಬಿಪಿನ್ ರಾವತ್ ಸದ್ಯದ ಪರಿಸ್ಥಿತಿ ಅವಲೋಕನ ಮಾಡಲಿದ್ಧಾರೆ ಎನ್ನಲಾಗುತ್ತಿದೆ.
ಗಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷದ ಬಳಿಕ ಮೊದಲ ಬಾರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಡಾಖ್ಗೆ ತೆರಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ನಿನ್ನೆ ಈ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.
ಯೋಜನೆಯಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಮುಂಜಾನೆಯೇ ಲಡಾಖ್ಗೆ ಭೇಟಿ ನೀಡಬೇಕಿತ್ತು. ಇಲ್ಲಿನ ಲೇಹ್ ಆಸ್ಪತ್ರೆಗೆ ತೆರಳಿ ಚೀನಾದೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಗಾಯಗೊಂಡ ಸೈನಿಕರನ್ನು ಯೋಗಕ್ಷೇಮವನ್ನು ವಿಚಾರಿಸಲಿದ್ದಾರೆ. ಜತೆಗೆ ಗಡಿಯಲ್ಲಿ ಸೈನಿಕ ಕಾರ್ಯಾಚರಣೆಗೆ ಸನ್ನದ್ಧಗೊಂಡಿರುವ ಸೇನೆಯನ್ನು ಪರಿಶೀಲಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಮಹತ್ವದ ಭೇಟಿಯನ್ನು ನಾನಾ ಕಾರಣಗಳಿಂದಾಗಿ ಮುಂದೂಡಲಾಗಿದೆ.
ಹೀಗಾಗಿ ಈ ಮಾತುಕತೆಗೆ ಅನುಗುಣವಾಗಿ ಚೀನಾ ಸೇನೆಯ ಬದ್ಧತೆಯನ್ನು ಕಾದು ನೋಡಿ ಮುಂದಿನ ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದ್ದು, ಇದೇ ಕಾರಣಕ್ಕೆ ಸಚಿವ ರಾಜನಾಥ್ ಸಿಂಗ್ ಅವರ ಲಡಾಖ್ ಭೇಟಿಯನ್ನು ಮುಂದೂಡಲಾಗಿದೆ ಎನ್ನಲಾಗುತಿದೆ.













