Last Updated:
ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ವ್ಯತ್ಯಾಸ. ಆಲಮಟ್ಟಿ, ಹಿಡ್ಕಲ್, ಭೀಮಾ ಲಿಫ್ಟ್ ಭರ್ತಿ. ಕಾವೇರಿ ಕೊಳ್ಳದ ಕೆ.ಆರ್.ಸಾಗರ, ಕಬಿನಿ ಮಟ್ಟ ತಗ್ಗಿದೆ.
ಬೆಂಗಳೂರು: ಕರ್ನಾಟಕದಾದ್ಯಂತ ಮಳೆಯ (Rain) ಅಬ್ಬರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ರಾಜ್ಯದ ಪ್ರಮುಖ ಜಲಾಶಯಗಳ (Reservoirs) ನೀರಿನ ಮಟ್ಟದಲ್ಲಿ (Water Level) ಗಮನಾರ್ಹ ಬದಲಾವಣೆಗಳು ಕಂಡುಬರುತ್ತಿವೆ. ಉತ್ತರ ಕರ್ನಾಟಕ ಹಾಗೂ ಕರಾವಳಿ-ಮಲೆನಾಡಿನ ಕೆಲವು ಭಾಗಗಳಲ್ಲಿ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿದ್ದರೆ, ಕಾವೇರಿ (Cauvery) ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ನೀರು ನಿರೀಕ್ಷಿತ ಮಟ್ಟಕ್ಕಿಂತ ಕೊಂಚ ತಗ್ಗಿದೆ.














