Last Updated:
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಊರುಗಳಿಗೆ ತೆರಳುವವರಿಗಾಗಿ KSRTC 2,400 ವಿಶೇಷ ಬಸ್ಗಳನ್ನು ವ್ಯವಸ್ಥೆ ಮಾಡಿದೆ. ಸೆ.11ರಿಂದ ಸೆ.13ರವರೆಗೆ ವಿಶೇಷ ಸೇವೆ ಇರಲಿದೆ.
ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ (Celebration) ಬೆಂಗಳೂರಿನಿಂದ ತಮ್ಮೂರಿಗೆ ತೆರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರು ದಿನ ಸಾಲು ಸಾಲು ರಜೆ (Holiday) ಹಿನ್ನೆಲೆ ಇಂದೇ ಸಂಜೆ ಹಾಗೂ ರಾತ್ರಿ ಬೆಂಗಳೂರಿನ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ಹಬ್ಬದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನವೇ 4 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ತಮ್ಮೂರಿನತ್ತ ಪ್ರಯಾಣಿಸಿದ್ದಾರೆ. ಸಂಜೆ ಹಾಗೂ ರಾತ್ರಿ ವೇಳೆಗೆ ಈ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ಇಂದು ಒಂದೇ ದಿನ ಬೆಂಗಳೂರಿನಿಂದ ಒಂದು ಲಕ್ಷಕ್ಕೂ ಹೆಚ್ಚು ಜನ ಊರುಗಳಿಗೆ ತೆರಳುವ ನಿರೀಕ್ಷೆ ಇದೆ.














