India
oi-Mamatha M

ಇಂಫಾಲ್, ಜುಲೈ. 05: ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಮಣಿಪುರ ಸರ್ಕಾರವು ಗಣನೀಯ ಸಂಖ್ಯೆಯ ಸಚಿವರು, ಶಾಸಕರು, ರಾಜಕಾರಣಿಗಳು ಮತ್ತು ಅಧಿಕಾರಿಗಳ ವಿಐಪಿ ಭದ್ರತೆಯನ್ನು ಕಡಿಮೆಗೊಳಿಸಿದೆ. ಈ 2,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ಈಗ ರಾಜ್ಯದ ತೊಂದರೆಗೊಳಗಾದ ಪ್ರದೇಶಗಳಲ್ಲಿ ಕೃಷಿಯಲ್ಲಿ ತೊಡಗಿರುವ ರೈತರ ರಕ್ಷಣೆಗೆ ನಿಯೋಜಿಸಲಾಗುವುದು ಎಂದು ಮೂಲಗಳು ಬುಧವಾರ ತಿಳಿಸಿವೆ.
ಬೆಳೆ ಹಂಗಾಮು ಆರಂಭಿಸುವ ರೈತರಿಗೆ ಭದ್ರತೆ ಒದಗಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ ಎರಡು ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ. “ಅನೇಕ ಸಚಿವರು, ಶಾಸಕರು, ಇತರ ರಾಜಕಾರಣಿಗಳು, ಪೌರಕಾರ್ಮಿಕರು, ಮಾಜಿ ಅಧಿಕಾರಿಗಳ ಭದ್ರತೆಯನ್ನು ತೆಗೆಯಲಾಗಿದ್ದು, ಸುಮಾರು 2,000 ಭದ್ರತಾ ಸಿಬ್ಬಂದಿಯನ್ನು ಮುಕ್ತಗೊಳಿಸಲಾಗಿದೆ. ಮಣಿಪುರದ ತೊಂದರೆಗೊಳಗಾದ ಪ್ರದೇಶಗಳಲ್ಲಿ ಕೃಷಿಯಲ್ಲಿ ತೊಡಗಿರುವ ರೈತರ ರಕ್ಷಣೆಗೆ ಇವರನ್ನು ನಿಯೋಜಿಸಲಾಗುವುದು” ಎಂದು ಮೂಲಗಳು ತಿಳಿಸಿವೆ.

ಸೋಮವಾರ ನಡೆದ ಏಕೀಕೃತ ಕಮಾಂಡ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, ಬೆಳೆ ಹಂಗಾಮು ಆರಂಭಿಸುವ ರೈತರಿಗೆ ಭದ್ರತೆ ಒದಗಿಸುವ ನಿರ್ಧಾರ ಕೈಗೊಳ್ಳಲಾಗಿದೆ. ”ಕೃಷಿ ಉದ್ದೇಶಕ್ಕಾಗಿ ಐದು ಜಿಲ್ಲೆಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನೀಡಲು ಸರಕಾರ ನಿರ್ಧರಿಸಿದೆ. ಕಾಂಗ್ಪೋಕ್ಪಿ, ಚುರಾಚಂದ್ಪುರ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮ ಮತ್ತು ಕಕ್ಚಿಂಗ್ ಜಿಲ್ಲೆಗಳಲ್ಲಿ ಸುಮಾರು 2,000 ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು” ಎಂದು ಹೇಳಿದ್ದಾರೆ.
Manipur: ಕುಕಿ ನಾಯಕನ ಮನೆಗೆ ಬೆಂಕಿ- ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದ ಉದ್ರಿಕ್ತರು, ಅತಿರೇಕಕ್ಕೆ ತಲುಪಿದ ಹಿಂಸಾಚಾರ
ಭದ್ರತೆಯ ಕಾರಣದಿಂದ ಇಂಫಾಲ್ ಕಣಿವೆಯು ಬೆಟ್ಟಗಳೊಂದಿಗೆ ವಿಲೀನಗೊಳ್ಳುವ ಪ್ರದೇಶಗಳಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂಬ ಆತಂಕವಿದೆ. ಮೈತಿಯಿ ಸಮುದಾಯ ಕಣಿವೆಯಲ್ಲಿ ವಾಸಿಸುತ್ತಿದ್ದರೆ ಮತ್ತು ಕುಕಿಗಳು ಬೆಟ್ಟಗಳಲ್ಲಿ ವಾಸಿಸುತ್ತಿದ್ದಾರೆ. ಎರಡೂ ಸಮುದಾಯಗಳು ಜನಾಂಗೀಯ ರೇಖೆಗಳಲ್ಲಿ ವಿಭಜಿಸಲ್ಪಟ್ಟಿವೆ, ಇದು ಕಳೆದ ಎರಡು ತಿಂಗಳುಗಳಲ್ಲಿ ಅನೇಕ ಹಿಂಸಾತ್ಮಕ ಘಟನೆಗಳಿಗೆ ಕಾರಣವಾಗಿದೆ.

ಇತ್ತ, ರಾಜ್ಯದಲ್ಲಿನ ಹಿಂಸಾಚಾರದ ಹಿನ್ನೆಲೆ ವದಂತಿಗಳನ್ನು ತಡೆಗಟ್ಟಲು ಮಣಿಪುರದಲ್ಲಿ ಇಂಟರ್ನೆಟ್ ಮೇಲಿನ ನಿಷೇಧವನ್ನು ಮತ್ತಷ್ಟು ವಿಸ್ತರಿಸಲಾಗಿದೆ. ಮೇ 3 ರಂದು ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಿಂದ ಇಲ್ಲಿಯವರೆಗೆ ಸುಮಾರು 120 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 3000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಪರಿಶಿಷ್ಟ ಪಂಗಡದ (ಎಸ್ಟಿ) ಸ್ಥಾನಮಾನಕ್ಕಾಗಿ ಮೈತಿಯಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಮೇ 3 ರಂದು ಬೆಟ್ಟದ ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಮಣಿಪುರದಲ್ಲಿ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿದವು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ ತಿಂಗಳು ನಾಲ್ಕು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿದ್ದರು ಮತ್ತು ಈಶಾನ್ಯ ರಾಜ್ಯದಲ್ಲಿ ಶಾಂತಿಯನ್ನು ಮರಳಿ ತರುವ ಪ್ರಯತ್ನದಲ್ಲಿ ಅನೇಕ ಜನರನ್ನು ಭೇಟಿಯಾದರು. ಹಿಂಸಾಚಾರವನ್ನು ನಿಯಂತ್ರಿಸಲು ಮತ್ತು ರಾಜ್ಯದಲ್ಲಿ ಸಹಜ ಸ್ಥಿತಿಗೆ ತರಲು ಮಣಿಪುರ ಪೊಲೀಸರಲ್ಲದೆ ಸುಮಾರು 40,000 ಕೇಂದ್ರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
English summary
Manipur government has downgraded the VIP security number of ministers, MLAs, politicians and bureaucrats, now be deployed to guard farmers engaged in cultivation. know more.
Story first published: Wednesday, July 5, 2023, 23:04 [IST]