Last Updated:
ಪಂದ್ಯಕ್ಕೂ ಮುನ್ನ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಆರ್ಸಿಬಿ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು. ಆದ್ರೆ, ಈ ವೇಳೆ ನಮಗೆ ಅನ್ಯಾಯವಾಗಿದೆ ಎಂದು ಬೇಸರ ಹೊರಹಾಕಿದ್ದಾರೆ. ಡಿಕೆಶಿ ಅಸಮಾಧಾನ ಹೊರಹಾಕಿದ್ದು ಯಾಕೆ? ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರ್ಸಿಬಿ (RCB) ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧ ಫೈನಲ್ ಪಂದ್ಯ ಶುರುವಾಗಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ ತಂಡ ಭರ್ಜರಿ ಬೌಲಿಂಗ್ ಮಾಡಿದೆ. ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡ ಸಂಪೂರ್ಣ ಮೇಲುಗೈ ಸಾಧಿಸಿದ್ದು, ಎರಡನೇ ಬಾರಿಗೆ ಕಪ್ ಎತ್ತಿ ಹಿಡಿಯಲು ಸಜ್ಜಾಗಿದೆ. ಪಂದ್ಯಕ್ಕೂ ಮುನ್ನ ರಾಜ್ಯದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಆರ್ಸಿಬಿ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು. ಆದ್ರೆ, ಈ ವೇಳೆ ನಮಗೆ ಅನ್ಯಾಯವಾಗಿದೆ ಎಂದು ಬೇಸರ ಹೊರಹಾಕಿದ್ದಾರೆ. ಡಿಕೆಶಿ ಅಸಮಾಧಾನ ಹೊರಹಾಕಿದ್ದು ಯಾಕೆ? ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.
ಅಭಿಮಾನಿಯಾಗಿರುವ ಡಿಕೆ ಶಿವಕುಮಾರ್ ಅವರು ಆರ್ಸಿಬಿ ಫೈನಲ್ ತಲುಪಿರುವ ಬಗ್ಗೆ ಮಾತನಾಡಿದರು. ರಾಯಲ್ ಚಾಲೆಂಜರ್ಸ್ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು. ಆದ್ರೆ ಇದೇ ವೇಳೆ ಅಸಮಾಧಾನ ವ್ಯಕ್ತಪಡಿಸಿದರು. ಫೈನಲ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದ್ರೆ, ರಾಜಕಾರಣದಿಂದ ಅವರು ಅಹಮದಾಬಾದ್ಗೆ ತೆಗೆದುಕೊಂಡು ಹೋಗಿದ್ದಾರೆ. ನಮಗೆ ಅನ್ಯಾಯವಾಗಿದೆ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ, ಆರ್ಸಿಬಿ ತಂಡ ಈ ಬಾರಿಯ ಐಪಿಎಲ್ ಸೀಸನ್ನಲ್ಲಿ ಚೆನ್ನಾಗಿ ಆಡುತ್ತಿದೆ. ಆರ್ಸಿಬಿ ಟೀಮ್ಗೆ ಶುಭವಾಗಲಿ ಎಂದು ಹೇಳಿದರು.
ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ಲೇ ಆಫ್ ಮತ್ತು ಫೈನಲ್ ಪಂದ್ಯವನ್ನು ಆಯೋಜಿಸಲಾಗಿತ್ತು. ಆದ್ರೆ, ಟೂರ್ನಿಯ ಅರ್ಧದಲ್ಲಿ ಫೈನಲ್ ಮತ್ತು ಪ್ಲೇ ಆಫ್ ಪಂದ್ಯವನ್ನು ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಶಿಫ್ಟ್ ಮಾಡಲಾಗಿತ್ತು. ಈ ವಿಚಾರ ರಾಜಕೀಯ ವಾಗ್ಯುದ್ಧಕ್ಕೂ ಸಹ ಕಾರಣವಾಗಿತ್ತು. ಇದೀಗ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಇದೇ ವಿಚಾರವನ್ನು ಪ್ರಸ್ತಾಪಿಸಿ ನಮಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.
ಇದಾದ ಬಳಿಕ ಭುವನೇಶ್ವರ್ ಕುಮಾರ್ 4 ಓವರ್ನ 4ನೇ ಎಸೆತದಲ್ಲಿ ಸಾಯಿ ಸುದರ್ಶನ್ (12) ಅವರನ್ನು ಔಟ್ ಮಾಡಿದರು. ಬಳಿಕ ಬಂದ ಬ್ಯಾಟ್ಸಮನ್ಗಳು ಹೆಚ್ಚು ಕ್ರೀಸ್ನಲ್ಲಿ ನಿಲ್ಲಲು ಆರ್ಸಿಬಿ ಬೌಲರ್ಗಳು ಅವಕಾಶ ಮಾಡಿಕೊಡಲಿಲ್ಲ. ಸತತ ವಿಕೆಟ್ಗಳನ್ನು ಕಳೆದುಕೊಂಡು ಗುಜರಾತ್ ಟೈಟಾನ್ಸ್ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಫೈನಲ್ನಲ್ಲಿ ಮೇಲುಗೈ ಸಾಧಿಸಿರುವ ಆರ್ಸಿಬಿ ತಂಡ ಎರಡನೇ ಬಾರಿಗೆ IPL ಟ್ರೋಫಿಯನ್ನು ಎತ್ತಿಹಿಡಿಯಲು ಸನ್ನಿಹಿತವಾಗಿದೆ.
(ವರದಿ: ಕಾರ್ತಿಕ್, ನ್ಯೂಸ್18 ಕನ್ನಡ, ಬೆಂಗಳೂರು)
Bangalore,Karnataka













