Last Updated:
K Annamalai: ಅಣ್ಣಾಮಲೈ ಬಿಜೆಪಿ ತೊರೆದು, ಹೊಸ ರಾಜಕೀಯ ಪಕ್ಷ ಸ್ಥಾಪಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೂನ್ 4ರಂದು ಅಣ್ಣಾಮಲೈ ಹುಟ್ಟುಹಬ್ಬವಿದ್ದು, ಅಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ತಮಿಳುನಾಡು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ (BJP state president) ಕೆಳಕ್ಕಿಳಿದ ನಂತರ ಮಾಜಿ ಪೊಲೀಸ್ ಅಧಿಕಾರಿ (Former police officer) ಕೆ. ಅಣ್ಣಾಮಲೈ (K. Annamalai) ಸೈಲೆಂಟ್ ಆಗಿದ್ರು. ತಮಿಳುನಾಡು ಬಿಜೆಪಿಯಿಂದ (Tamil Nadu BJP) ಅಣ್ಣಾಮಲೈ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ವಿಜಯ್ ದಳಪತಿ (Vijay Thalapathy) ಅವರ ಟಿವಿಕೆ (TVK) ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂಬ ವದಂತಿ ಹರಡಿತ್ತು. ಇದೀಗ ಕೆ ಅಣ್ಣಾಮಲೈ ಬಿಜೆಪಿ ತೊರೆದು, ಹೊಸ ರಾಜಕೀಯ ಪಕ್ಷ ಸ್ಥಾಪಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೂನ್ 4ರಂದು ಅಣ್ಣಾಮಲೈ ಹುಟ್ಟುಹಬ್ಬವಿದ್ದು, ಅಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಅಣ್ಣಾಮಲೈ ತಮಿಳು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾಗ, ಬಿಜೆಪಿ 2024ರ ಲೋಕಸಭಾ ಚುನಾವಣೆಯಲ್ಲಿ ಸ್ವಂತವಾಗಿ ಸ್ಪರ್ಧಿಸಿ ಶೇಕಡಾ 11ರಷ್ಟು ಮತಗಳನ್ನು ಪಡೆಯಿತು. ಅಣ್ಣಾಮಲೈ ಅವರನ್ನು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದ ನಂತರ, ಎಐಎಡಿಎಂಕೆ ಜೊತೆ ಬಲವಾದ ಮೈತ್ರಿ ಮಾಡಿಕೊಂಡಿದ್ದರೂ ಬಿಜೆಪಿ ಕೇವಲ ಶೇಕಡಾ 3 ರಷ್ಟು ಮತಗಳನ್ನು ಮಾತ್ರ ಪಡೆಯಲು ಸಾಧ್ಯವಾಯಿತು.
ಅಣ್ಣಾಮಲೈ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದಾಗ, ಅವರ ತೀಕ್ಷ್ಣ ಭಾಷಣಗಳು ಮತ್ತು ಬಿಡುವಿಲ್ಲದ ಪ್ರಚಾರದಿಂದ ಅನೇಕ ಯುವಕರು ಪ್ರಭಾವಿತರಾದರು. ಆದರೆ ಅತ್ತ ತಮಿಳುನಾಡು ರಾಜಕೀಯಕ್ಕೆ ಹೊಸಬರಾದ ವಿಜಯ್ ನೇತೃತ್ವದ ಟಿವಿಕೆ ಎದುರಿಸಿದ ಮೊದಲ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಿತು. ಡಿಎಂಕೆ ಮತ್ತು ಎಐಎಡಿಎಂಕೆ ಮಾತ್ರವಲ್ಲದೆ ಎಲ್ಲಾ ಪಕ್ಷದ ಮತಗಳನ್ನು ನಿಯಂತ್ರಿಸಿದ ಟಿವಿಕೆ, ಬಿಜೆಪಿಯ ಮತ ಪಾಲನ್ನು ಸಹ ಕಡಿಮೆ ಮಾಡಿತು.
ತಮಿಳುನಾಡು ರಾಜಕೀಯದಲ್ಲಿ ಯುವಕರು ಪ್ರಮುಖ ರಾಜಕೀಯ ಬದಲಾವಣೆಯನ್ನು ತಂದಿದ್ದರೂ, ಬಿಜೆಪಿಯಲ್ಲಿ ತಮಗೆ ಮನ್ನಣೆ ಸಿಕ್ಕಿಲ್ಲ ಎಂದು ಅಣ್ಣಾಮಲೈ ಭಾವಿಸಿದ್ದಾರಂತೆ. ಅದಕ್ಕಾಗಿಯೇ ಅವರು ಸ್ವತಂತ್ರವಾಗಿ ರಾಜಕೀಯವನ್ನು ನಡೆಸಲು ಪ್ರತ್ಯೇಕ ಪಕ್ಷವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದಾರೆ ಮತ್ತು ಅದಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ರೂಮರ್ಸ್ ದಟ್ಟವಾಗಿದೆ.
ಬಿಜೆಪಿ ಹೈಕಮಾಂಡ್ ಅವರನ್ನು ಹೇಗಾದರೂ ಬಿಜೆಪಿಯಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಹೇಳಲಾಗುತ್ತದೆ. ದೆಹಲಿ ನಾಯಕರು ಕೂಡ ಅಣ್ಣಾಮಲೈ ಅವರಿಗೆ ಎರಡು ಆಯ್ಕೆಗಳನ್ನು ನೀಡುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಒಂದೋ ಅವರಿಗೆ ಮತ್ತೆ ರಾಜ್ಯಾಧ್ಯಕ್ಷ ಹುದ್ದೆ ನೀಡುವುದು ಅಥವಾ ಕೇಂದ್ರ ಸಚಿವ ಸ್ಥಾನ ನೀಡುವುದು.
ಆದಾಗ್ಯೂ, ಅಣ್ಣಾಮಲೈ ತಮ್ಮದೇ ಆದ ಪಕ್ಷವನ್ನು ಸ್ಥಾಪಿಸಿ, ತಮಿಳುನಾಡು ರಾಜಕೀಯವನ್ನು ಪ್ರವೇಶಿಸಲು ದೃಢನಿಶ್ಚಯ ಮಾಡಿದ್ದಾರೆ ಮತ್ತು ಆ ಕುರಿತು ಒಂದು ಅಥವಾ ಎರಡು ವಾರಗಳಲ್ಲಿ ಘೋಷಣೆ ಹೊರಬೀಳಬಹುದು ಎಂದು ಹೇಳಲಾಗುತ್ತಿದೆ. ಇದೇ ಜೂನ್ 4ರಂದು ಅವರ ಹುಟ್ಟುಹಬ್ಬವಿದ್ದು, ಅಂದು ಮಹತ್ವದ ಘೋಷಣೆ ಮಾಡಬಹುದು ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಅಣ್ಣಾಮಲೈ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.













