Last Updated:
ಪೊಲೀಸರು ಎಲ್ಲಾ ಕೋನಗಳಿಂದ ನೋಡುತ್ತಿದ್ದು, ಅಪಘಾತಕ್ಕೆ ಕಾರಣವಾದ ಸಂಪೂರ್ಣ ಸಂದರ್ಭಗಳನ್ನು ನಿರ್ಧರಿಸುತ್ತಿರುವುದರಿಂದ ತನಿಖೆ ಮುಂದುವರೆದಿದೆ ಎಂದು ವೃತ್ತ ಅಧಿಕಾರಿ ತಿಳಿಸಿದ್ದಾರೆ.
ಮಿರ್ಜಾಪುರ: ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದ ಲಹುರಿಯಾ ದಹ್ ಗ್ರಾಮದ ಬಳಿ ನಡೆದಿದೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ನಿವಾಸಿಗಳಾದ ಕುಟುಂಬವು ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಡಿಕ್ಕಿ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಪೊಲೀಸರು ಮೃತರನ್ನು ವಿಕಾಸ್ ಮತ್ತು ಸೋನಮ್ ಎಂದು ಗುರುತಿಸಿದ್ದಾರೆ, ಪತಿ ಮತ್ತು ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ‘ವಾಹನದಲ್ಲಿದ್ದ ಇತರ ನಾಲ್ವರು ಗಾಯಗೊಂಡಿದ್ದಾರೆ, ಅವರಲ್ಲಿ ಮೂವರು ಮಕ್ಕಳಾದ ಹಿಮಾಂಶು, ಸಕ್ಷಮ್ ಮತ್ತು ರಾಧಾ ಸೇರಿದ್ದಾರೆ. ರಾಧಾ ಅವರ ಸ್ಥಿತಿ ಗಂಭೀರವಾಗಿದೆ’ ಎಂದು ಅವರು ಹೇಳಿದರು.
ದಂಪತಿಯ ಇಬ್ಬರು ಪುತ್ರರಾದ ಶಿವಾಂಶ್ ಮತ್ತು ರುದ್ರ ಸಣ್ಣಪುಟ್ಟ ಅಥವಾ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಇತರರನ್ನು ಡ್ರಮ್ಮಂಡ್ಗಂಜ್ ಪೊಲೀಸರು ಮತ್ತು ಸ್ಥಳೀಯರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಎಲ್ಲಾ ಕೋನಗಳಿಂದ ನೋಡುತ್ತಿದ್ದು, ಅಪಘಾತಕ್ಕೆ ಕಾರಣವಾದ ಸಂಪೂರ್ಣ ಸಂದರ್ಭಗಳನ್ನು ನಿರ್ಧರಿಸುತ್ತಿರುವುದರಿಂದ ತನಿಖೆ ಮುಂದುವರೆದಿದೆ ಎಂದು ವೃತ್ತ ಅಧಿಕಾರಿ ತಿಳಿಸಿದ್ದಾರೆ.
Mirzapur,Uttar Pradesh













