Election Fund Scam: ಚುನಾವಣಾ ನಿಧಿ ದುರುಪಯೋಗ; ಬಿಜೆಪಿ ರಾಜ್ಯ ಕಾರ್ಯದರ್ಶಿ ಸೇರಿ ಮೂವರನ್ನು ವಜಾ ಮಾಡಿದ ಕೇಸರಿ ಪಕ್ಷ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಬಿಜೆಪಿ ಪಕ್ಷದ ಚುನಾವಣಾ ನಿಧಿಯಿಂದ ಕೋಟ್ಯಂತರ ರೂಪಾಯಿ ಹಣವನ್ನು ವಂಚನೆ ಮಾಡಿದ ಪ್ರಕರಣ ಪತ್ತೆಯಾದ ನಂತರ ಬಿಜೆಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಸೇರಿದಂತೆ ಮೂವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

News18
News18

ನವದೆಹಲಿ: ಬಿಜೆಪಿ ಪಕ್ಷದ ಚುನಾವಣಾ ನಿಧಿಯಿಂದ (BJP Election Fund Scam) ಕೋಟ್ಯಂತರ ರೂಪಾಯಿ ಹಣವನ್ನು ವಂಚನೆ ಮಾಡಿರುವ ಆರೋಪದ ಮೇಲೆ ಪಕ್ಷದ ರಾಜ್ಯ ಕಾರ್ಯದರ್ಶಿ ಸೇರಿ ಮೂವರ ವಿರುದ್ಧ ಭಾರತೀಯ ಜನತಾ ಪಾರ್ಟಿ ಶಿಸ್ತು ಕ್ರಮ ಕೈಗೊಂಡಿದೆ.

ಬಿಜೆಪಿ ಪಕ್ಷದ ಚುನಾವಣಾ ನಿಧಿಯಿಂದ ಕೋಟ್ಯಂತರ ರೂಪಾಯಿ ಹಣವನ್ನು ವಂಚನೆ ಮಾಡಿದ ಪ್ರಕರಣ ಪತ್ತೆಯಾದ ನಂತರ ಕೇರಳ ಬಿಜೆಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಅಂಜನಾ ರಂಜಿತ್ ಸೇರಿದಂತೆ ಮೂವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯ ಶಿಸ್ತು ಸಮಿತಿಯ ಶಿಫಾರಸಿನ ಆಧಾರದ ಮೇಲೆ ಕೇರಳಂ ಬಿಜೆಪಿ ರಾಜ್ಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಈ ಕ್ರಮ ಕೈಗೊಂಡರು. ಶಿಸ್ತು ಕ್ರಮ ಏಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿಲ್ಲ. ಬಿಜೆಪಿ ಕೇಂದ್ರ ನಾಯಕತ್ವದ ವಿಶೇಷ ಲೆಕ್ಕಪರಿಶೋಧನಾ ತಂಡ ನಡೆಸಿದ ತೀವ್ರ ತಪಾಸಣೆಯ ಸಮಯದಲ್ಲಿ ಅತ್ಯಂತ ಗಂಭೀರವಾದ ಆರ್ಥಿಕ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ವರದಿಯಾಗಿದೆ.

ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಒಟ್ಟು 12 ಕೋಟಿ ರೂ.ಗಳ ಅವ್ಯವಹಾರ ನಡೆದಿದೆ ಎಂದು ಕೇಂದ್ರ ಲೆಕ್ಕಪರಿಶೋಧನಾ ತಂಡವು ಕಂಡುಹಿಡಿದಿದೆ. ಚುನಾವಣಾ ನಿಧಿಯನ್ನು ನಿರ್ವಹಿಸುತ್ತಿದ್ದ ಅಂಜನಾ ವೈಯಕ್ತಿಕವಾಗಿ 1.5 ಕೋಟಿ ರೂ.ಗಳ ಅವ್ಯವಹಾರ ನಡೆಸಿದ್ದಾರೆ ಎಂದು ಲೆಕ್ಕಪರಿಶೋಧನೆಯಲ್ಲಿ ತಿಳಿದುಬಂದಿದೆ. ಹಣವನ್ನು ಇರಿಸಲಾಗಿದ್ದ ನಿಧಿ ಪೆಟ್ಟಿಗೆಗಳು ಸಹ ಕಚೇರಿಯಿಂದ ಕಾಣೆಯಾಗಿವೆ ಎಂಬ ಆಘಾತಕಾರಿ ಮಾಹಿತಿಯೂ ಹೊರಬಿದ್ದಿದೆ.

ರಾಜೀವ್ ಚಂದ್ರಶೇಖರ್ ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಅಂಜನಾ ಅವರಿಗೆ ರಾಜ್ಯ ಸಮಿತಿ ಕಚೇರಿಯ ಪ್ರಮುಖ ಜವಾಬ್ದಾರಿಗಳನ್ನು ನೀಡಲಾಗಿತ್ತು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed