Last Updated:
ಸೋನಮ್ ವಾಂಗ್ಚುಕ್ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಈ ಒಂದು ಬೇಡಿಕೆಯನ್ನು ಈಡೇರಿಸಿದರೆ ಉಪವಾಸ ಸತ್ಯಾಗ್ರಹವನ್ನು ಕೈಬಿಡುತ್ತೇನೆ ಎಂದು ಹೇಳಿದ್ದಾರೆ.
ದೆಹಲಿ: ನೀಟ್ ಪರೀಕ್ಷೆ (NEET Exam) ಅಕ್ರಮ ದೇಶಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ದೆಹಲಿಯ ಜಂತರ್ ಮಂತರ್ನಲ್ಲಿ (Jantar Mantar) ಪ್ರಶ್ನೆ ಪತ್ರಿಕೆ ಸೋರಿಕೆ (Question Paper Leak) ಖಂಡಿಸಿ ಸಿಜೆಪಿ ಪಾರ್ಟಿಯ (CJP) ಪ್ರತಿಭಟನೆ ಮುಂದುವರಿದಿದೆ. ಅಲ್ಲದೇ ವಿಪಕ್ಷಗಳು ಸಹ ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದಾವೆ. ಸದ್ಯ, ಪರಿಸ್ಥಿತಿ ಹೀಗಿರುವಾಗಲೇ ಸೋನಮ್ ವಾಂಗ್ಚುಕ್ (Sonam Wangchuk) ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಈ ಒಂದು ಬೇಡಿಕೆಯನ್ನು ಈಡೇರಿಸಿದರೆ ಉಪವಾಸ ಸತ್ಯಾಗ್ರಹವನ್ನು ಕೈಬಿಡುತ್ತೇನೆ ಎಂದು ಹೇಳಿದ್ದಾರೆ.
ಇನ್ನು, ಮೂಲಗಳ ಪ್ರಕಾರ, ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಮಂಗಳವಾರ ರಾತ್ರಿ ಮೇದಾಂತ ಆಸ್ಪತ್ರೆಯಲ್ಲಿ ದಾಖಲಾಗಿರುವ ಸೋನಮ್ ವಾಂಗ್ಚುಕ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದ್ದು, ಸಂಸತ್ತಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಸಮಸ್ಯೆಯನ್ನು ಚರ್ಚಿಸುವ ಬಗ್ಗೆ ಸರ್ಕಾರ ಪರಿಗಣಿಸುತ್ತದೆ ಎಂದು ಸಚಿವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ಪ್ರತಿಭಟನೆ ಮುಂದುವರಿದಿದೆ. ಇಂದು ಸಹ ಸಾವಿರಾರು ಪ್ರತಿಭಟನಾಕಾರರು ಜಂತರ್ ಮಂತರ್ಗೆ ಆಗಮಿಸಿ ಸಿಜೆಪಿ ಪ್ರತಿಭಟನೆಗೆ ಸಾಥ್ ಕೊಟ್ಟಿದ್ದಾರೆ. ಈ ವೇಳೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಸಿಜೆಪಿ ವಕ್ತಾರ ಆಶುತೋಷ್ ರಂಕಾ ಮಾತನಾಡಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಾವು ಜಂತರ್ ಮಂತರ್ ತೊರೆಯುವುದಿಲ್ಲ ಎಂದಿದ್ದಾರೆ.














