Allu Arjun: ಕಾಲ್ತುಳಿತ ಪ್ರಕರಣ; ನಟ ಅಲ್ಲು ಅರ್ಜುನ್‌ಗೆ ಬಿಗ್ ಶಾಕ್! ಕೋರ್ಟ್​​ನಲ್ಲಿ ಇಂದು ಆಗಿದ್ದೇನು? | | ACTPnews

ನಟ ಅಲ್ಲು ಅರ್ಜುನ್


Last Updated:

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ನಟ ಅಲ್ಲು ಅರ್ಜುನ್ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ್ದು, ಮುಂದಿನ ವಿಚಾರಣೆಗೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ನಟ ಅಲ್ಲು ಅರ್ಜುನ್
ನಟ ಅಲ್ಲು ಅರ್ಜುನ್

ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ (Allu Arjun) ಅವರಿಗೆ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಮಹತ್ವದ ಹಿನ್ನಡೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿ ಕ್ರಿಮಿನಲ್ ನ್ಯಾಯಾಲಯವು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಅವರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ್ದು, ಮುಂದಿನ ವಿಚಾರಣೆಗೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ. ಈ ಬೆಳವಣಿಗೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ತಿರುವು ಪಡೆದಂತಾಗಿದೆ.

2024ರ ಡಿಸೆಂಬರ್ 4ರಂದು ಹೈದರಾಬಾದ್‌ನ ಆರ್‌ಟಿಸಿ ಕ್ರಾಸ್ ರಸ್ತೆಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ‘ಪುಷ್ಪ 2: ದಿ ರೂಲ್’ ಚಿತ್ರದ ವಿಶೇಷ ಪ್ರೀಮಿಯರ್ ಪ್ರದರ್ಶನ ಆಯೋಜಿಸಲಾಗಿತ್ತು. ಚಿತ್ರತಾರೆಯಾದ ಅಲ್ಲು ಅರ್ಜುನ್ ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ಥಿಯೇಟರ್ ಸುತ್ತಮುತ್ತ ಜಮಾಯಿಸಿದ್ದರು.

ಈ ವೇಳೆ ಜನಸಂದಣಿ ನಿಯಂತ್ರಣ ತಪ್ಪಿ ಕಾಲ್ತುಳಿತ ಉಂಟಾಯಿತು. ಘಟನೆಯಲ್ಲಿ ರೇವತಿ ಎಂಬ 39 ವರ್ಷದ ಮಹಿಳೆ ಉಸಿರುಗಟ್ಟುವಿಕೆಯಿಂದ ಮೃತಪಟ್ಟರೆ, ಅವರ ಎಂಟು ವರ್ಷದ ಪುತ್ರ ಶ್ರೀತೇಜ ಗಂಭೀರವಾಗಿ ಗಾಯಗೊಂಡಿದ್ದನು. ಈ ಘಟನೆ ರಾಜ್ಯದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು.

ಸರಿಯಾದ ಭದ್ರತಾ ಅನುಮತಿಗಳ ಕೊರತೆ, ಪೊಲೀಸ್ ಎಚ್ಚರಿಕೆಗಳನ್ನು ನಿರ್ಲಕ್ಷ್ಯ ಮಾಡಿರುವುದು ಹಾಗೂ ಕಾರ್ಯಕ್ರಮ ನಿರ್ವಹಣೆಯಲ್ಲಿ ಸಮನ್ವಯದ ಕೊರತೆ ದುರಂತಕ್ಕೆ ಕಾರಣವಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ಒಟ್ಟು 23 ಜನರನ್ನು ಆರೋಪಿಗಳಾಗಿ ಸೇರಿಸಲಾಗಿದೆ.

ಅಲ್ಲು ಅರ್ಜುನ್ ವಿರುದ್ಧವೂ ಆರೋಪ

ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಥಿಯೇಟರ್ ನಿರ್ವಹಣಾ ಮಂಡಳಿ ಮತ್ತು ಸಿಬ್ಬಂದಿಯನ್ನು A1 ರಿಂದ A10ರವರೆಗೆ ಆರೋಪಿಗಳಾಗಿ ಸೇರಿಸಲಾಗಿದ್ದು, ನಟ ಅಲ್ಲು ಅರ್ಜುನ್ ಅವರನ್ನು A11 ಆರೋಪಿಯಾಗಿ ನಮೂದಿಸಲಾಗಿದೆ.

ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದ ನಾಂಪಲ್ಲಿ ನ್ಯಾಯಾಲಯವು ಪ್ರಾಥಮಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಎಲ್ಲಾ ಪ್ರಮುಖ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು. ವಿಚಾರಣೆಗೆ ವೈಯಕ್ತಿಕವಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು.

ಆದರೆ ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಮುಂದಿನ ವಿಚಾರಣೆಗೆ ಖುದ್ದಾಗಿ ಹಾಜರಾಗುವುದು ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಹೀಗಾಗಿ ಅಲ್ಲು ಅರ್ಜುನ್ ಅವರಿಗೆ ವೈಯಕ್ತಿಕ ಹಾಜರಾತಿ ಕಡ್ಡಾಯವಾಗಿದೆ.

ಇಂದು ನಡೆದ ವಿಚಾರಣೆಗೆ ಪ್ರಕರಣದಲ್ಲಿ ಹೆಸರು ಸೇರಿರುವ ಇತರ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ ಅಲ್ಲು ಅರ್ಜುನ್ ಮಾತ್ರ ಗೈರಾಗಿದ್ದರು. ಅವರ ಪರ ವಕೀಲರು ಹಾಜರಾಗಿ ವಿನಾಯಿತಿ ಅರ್ಜಿ ಸಲ್ಲಿಸಿ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದರು.

ಪ್ರಕರಣದ ಮುಂದಿನ ವಿಚಾರಣೆಯನ್ನು ನಾಂಪಲ್ಲಿ ನ್ಯಾಯಾಲಯ ಜುಲೈ 6ಕ್ಕೆ ಮುಂದೂಡಿದೆ. ಅಂದು ಅಲ್ಲು ಅರ್ಜುನ್ ಖುದ್ದಾಗಿ ಕೋರ್ಟ್‌ಗೆ ಹಾಜರಾಗಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed