Last Updated:
ಭಾರೀ ಮಳೆಯ ಕಾರಣ ಯಾತ್ರಿಕರ ಆಗಮನದಲ್ಲಿ ಇಳಿಕೆ ಕಂಡುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜಮ್ಮು ನೆಲೆಯಿಂದ ಯಾತ್ರಾರ್ಥಿಗಳು ತಮ್ಮ ಯಾತ್ರೆಯನ್ನು ಮುಂದುವರಿಸಲು ಅನುಮತಿಸುವ ಮೊದಲು ಪರಿಸ್ಥಿತಿ ಮತ್ತು ಹವಾಮಾನವನ್ನು ವಿಶ್ಲೇಷಿಸಲಾಗುವುದು ಎಂದು ಅವರು ಹೇಳಿದರು.
ಜಮ್ಮು ಕಾಶ್ಮೀರ: ಜಮ್ಮುವಿನಲ್ಲಿ ಮುಂದಿನ ಕೆಲವು ದಿನಗಳವರೆಗೆ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿರುವುದರಿಂದ ಸುರಕ್ಷತಾ ಮುನ್ನೆಚ್ಚರಿಕೆಯಾಗಿ ಶ್ರೀ ಅಮರನಾಥ ಯಾತ್ರೆಯನ್ನು (Amarnath Yatra 2026) ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.














