Last Updated:
ವಿರೋಧ ಪಕ್ಷದತ್ತ ಗುರಿಯಿಟ್ಟು ಮಾತನಾಡಿದ ಅಮಿತ್ ಶಾ ಅವರು, ‘ನೀವು ಚರ್ಚೆಯನ್ನು ಏಕೆ ಬಯಸುವುದಿಲ್ಲ ಎಂಬುದನ್ನು ನಾನು ಚರ್ಚಿಸುತ್ತೇನೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ಎನ್ಡಿಎ ಸರ್ಕಾರ ಎಲ್ಲವನ್ನೂ ಚರ್ಚಿಸಲು ಸಿದ್ಧವಾಗಿದೆ. ಅವರು ಸಂಸತ್ತು ಕಾರ್ಯನಿರ್ವಹಿಸಲು ಬಿಡುವುದಿಲ್ಲ’ ಎಂದು ಹೇಳಿದರು.
ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ (Parliament Monsoon Session) ನಡೆಯುತ್ತಿರುವ ಆಡಳಿತ ಮತ್ತು ವಿಪಕ್ಷಗಳ ನಡುವಿನ ಬಿಕ್ಕಟ್ಟಿನ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು (Amith Shah) ವಿಪಕ್ಷಗಳಿಗೆ ಸವಾಲು ಎಸೆದಿದ್ದಾರೆ.














