Last Updated:
12 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರು ತಕ್ಕ ಶಿಕ್ಷೆ ನೀಡಿದ್ದಾರೆ. ಬುಧವಾರ ಎನ್ಕೌಂಟರ್ನಲ್ಲಿ ಆರೋಪಿಯನ್ನು ಹತ್ಯೆ ಮಾಡಲಾಗಿದೆ.
12 ವರ್ಷದ ಬಾಲಕಿಯ ಕ್ರೂರವಾಗಿ ಅತ್ಯಾಚಾರ ಮಾಡಿ ಕೊಲೆ (Rape And Murder) ಮಾಡಿದ್ದ ಆರೋಪಿಗೆ ತಕ್ಕ ಶಿಕ್ಷೆಯಾಗಿದೆ. ಪಶ್ಚಿಮ ಬಂಗಾಳದ ಬರುಯಿಪುರ್ನಲ್ಲಿ 12 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪ್ರಮುಖ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಮುಖ್ಯ ಆರೋಪಿ ಪ್ರಭಾಶ್ ಮಂಡಲ್ ನನ್ನು ಪೊಲೀಸರು ಬುಧವಾರ ಎನ್ಕೌಂಟರ್ನಲ್ಲಿ (Encounter) ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆ ಸಾರ್ವಜನಿಕರಿಗೆ ಸಮಾಧಾನ ತಂದಿದೆ.
ಪೊಲೀಸರ ಪ್ರಕಾರ, ಆರೋಪಿಯನ್ನು ಅಪರಾಧದ ಸ್ಥಳವನ್ನು ಪುನರ್ನಿರ್ಮಿಸಲು ಕರೆದೊಯ್ಯುತ್ತಿದ್ದರು. ಈ ವೇಳೆ ಅವನು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ಆಗ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸರು ಆರೋಪಿಯನ್ನು ಅಪರಾಧದ ಸ್ಥಳವನ್ನು ಪುನರ್ನಿರ್ಮಿಸಲು ಕರೆದೊಯ್ದಾಗ ಪೊಲೀಸ್ ಅಧಿಕಾರಿಯಿಂದ ಬಂದೂಕನ್ನು ಕಸಿದುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ. ಆರೋಪಿ ಈ ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ. ನಂತರ ಆತನನ್ನು ಬರುಯಿಪುರ್ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಅವನು ಸಾವನ್ನಪ್ಪಿದ್ದಾನೆ.
ಮಂಗಳವಾರ ರಾತ್ರಿ 12:45ಕ್ಕೆ ಬರುಯಿಪುರ್ ಪೊಲೀಸ್ ಠಾಣೆಯ ತನಿಖಾಧಿಕಾರಿ ತಂಡದೊಂದಿಗೆ ಆರೋಪಿ ಪ್ರಭಾಶ್ ಮಂಡಲ್ ಅವರನ್ನು ಸೂರ್ಯಪುರದ ಅಪರಾಧ ಸ್ಥಳಕ್ಕೆ ಕರೆದೊಯ್ದಿದ್ದರು. ಅಪರಾಧದ ದೃಶ್ಯ ಪುನರ್ನಿರ್ಮಾಣಕ್ಕೆ ಮುಂಚೆ ಆರೋಪಿ ಒಬ್ಬ ಪೊಲೀಸ್ ಅಧಿಕಾರಿಯ ಬಂದೂಕನ್ನು ಕಸಿದುಕೊಂಡು ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ಪ್ರತೀಕಾರ ಗುಂಡು ಹಾರಿಸಿದ್ದಾರೆ. ಆರೋಪಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈ 4ರಂದು ಬಾಲಕಿ ಕಾಣೆಯಾಗಿದ್ದಳು. ಜುಲೈ 5ರಂದು ಬರುಯಿಪುರ್ನ ಕೊಳದಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದರು. ಪೊಲೀಸರು ವಿಧಿವಿಜ್ಞಾನ ಮತ್ತು ಪೋಸ್ಟ್ಮಾರ್ಟಮ್ ವರದಿಗಳಿಗಾಗಿ ಕಾಯುತ್ತಿದ್ದರು. ನಂತರ ಅಸಲಿ ಸತ್ಯ ಬಯಲಾಗಿದೆ.
ಪ್ರಾಥಮಿಕ ಮರಣೋತ್ತರ ವರದಿಯ ಪ್ರಕಾರ, ಬಾಲಕಿ ಮುಳುಗಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಅಂದರೆ ಕೊಳಕ್ಕೆ ಎಸೆಯುವಾಗ ಆಕೆ ಜೀವಂತವಾಗಿದ್ದಳು ಎನ್ನಲಾಗಿದೆ. ಆಕೆಯ ಶ್ವಾಸಕೋಶ ಮತ್ತು ಹೊಟ್ಟೆಯಲ್ಲಿ ನೀರು ಕಂಡುಬಂದಿದೆ. ಬಾಲಕಿಯ ದೇಹದ ಮೇಲೆ ಗಾಯಗಳಿದ್ದವು. ಮೂವರು ಆರೋಪಿಗಳು ಸೇರಿ ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾಗಿ ತಿಳಿದುಬಂದಿದೆ. ಅಲ್ಲದೇ ಆರೋಪಿಗಳು ಈ ಘಟನೆಗೆ ಮುಂಚೆ ಮಾದಕ ದ್ರವ್ಯ ಸೇವಿಸಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸರ ಪ್ರಕಾರ, ಆರೋಪಿಗಳಲ್ಲಿ ಒಬ್ಬರು ಬಾಲಕಿಯನ್ನು ಗುಡಿಸಲಿಗೆ ಕರೆದೊಯ್ದಿದ್ದರು. ಅಲ್ಲಿ ಇತರ ಇಬ್ಬರು ಆರೋಪಿಗಳು ಇದ್ದರು. ಘಟನೆ ನಡೆದ ನಂತರ ಮೂವರೂ ಪ್ರತ್ಯೇಕವಾಗಿ ಪರಾರಿಯಾಗಿದ್ದರು.
ಘಟನೆಯ ನಂತರ ಬರುಯಿಪುರ್ ಪ್ರದೇಶದಲ್ಲಿ ಉದ್ವಿಗ್ನತೆ ಭುಗಿಲೆದ್ದಿತ್ತು. ಪೊಲೀಸರು ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಿದ್ದಾರೆ. ಐದು ಅಥವಾ ಹೆಚ್ಚು ಜನರು ಒಟ್ಟಿಗೆ ಸೇರುವುದನ್ನು ನಿಷೇಧಿಸಲಾಗಿದೆ. ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Jul 08, 2026 10:55 AM IST













