Last Updated:
ಜಾತಿ, ನಿವಾಸ ಪ್ರಮಾಣಪತ್ರಕ್ಕಾಗಿ ಕಚೇರಿ ಅಲೆದಾಟಕ್ಕೆ ಬ್ರೇಕ್. ಸಿಎಂ ಡಿ.ಕೆ. ಶಿವಕುಮಾರ್, ಡಿಸಿಎಂ ಡಾ. ಜಿ. ಪರಮೇಶ್ವರರಿಂದ ಮನೆ ಮನೆಗೆ ಉಚಿತ ಪ್ರಮಾಣಪತ್ರ ವಿತರಣೆಗೆ ಚಾಲನೆ.
ಬೆಂಗಳೂರು: ಸಾರ್ವಜನಿಕರ (Public) ದೀರ್ಘಕಾಲದ ಕಚೇರಿ ಅಲೆದಾಟಕ್ಕೆ ಹಾಗೂ ನಾನಾ ಹೈರಾಣುಗಳಿಗೆ ಕಂದಾಯ ಇಲಾಖೆಯು ಕೊನೆಗೂ ದೊಡ್ಡ ಬ್ರೇಕ್ ಹಾಕಿದೆ. ಇನ್ನು ಮುಂದೆ ಜಾತಿ ಮತ್ತು ನಿವಾಸಿ ಪ್ರಮಾಣ ಪತ್ರಕ್ಕಾಗಿ (Certificate) ತಾಲ್ಲೂಕು ಕಚೇರಿಗಳ ಮುಂದೆ ಗಂಟೆಗಟ್ಟಲೆ ಕಾಯುವ ಅಥವಾ ಸಾಲುಗಟ್ಟಿ ನಿಲ್ಲುವ ಅವಶ್ಯಕತೆಯೇ ಇಲ್ಲ. ರಾಜ್ಯ ಸರ್ಕಾರದ (Govt) ಮಹತ್ವಾಕಾಂಕ್ಷೆಯ ಮನೆ ಮನೆಗೆ ಉಚಿತ (Free) ಜಾತಿ ಪ್ರಮಾಣ ಪತ್ರ ವಿತರಣಾ ವಿಶೇಷ ಅಭಿಯಾನ ಹಾಗೂ ನೂತನ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ (CM) ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ಚಾಲನೆ ನೀಡಿದ್ದಾರೆ. ಈ ಅದ್ಭುತ ಯೋಜನೆಯಿಂದ ಜನಸಾಮಾನ್ಯರ ಪರದಾಟ ಕೊನೆಗೊಂಡಿದೆ.
ರಾಜ್ಯಾದ್ಯಂತ ಒಟ್ಟು 4.85 ಕೋಟಿ ಡಿಜಿಟಲ್ ಜಾತಿ ಪ್ರಮಾಣ ಪತ್ರಗಳನ್ನು ಗ್ರಾಮವಾರು ವಿಂಗಡಿಸಿ ಅತ್ಯಂತ ವ್ಯವಸ್ಥಿತವಾಗಿ ಜಿಲ್ಲಾಧಿಕಾರಿಗಳಿಗೆ ಒದಗಿಸಲಾಗಿದೆ. ಇವುಗಳನ್ನು ಮುದ್ರಿಸಿ ನೇರವಾಗಿ ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ಬೃಹತ್ ಕಾರ್ಯ ನಡೆಯುತ್ತಿದೆ. ವಿಶೇಷವೆಂದರೆ, ಈಗಾಗಲೇ ಸುಮಾರು 85 ಲಕ್ಷ ಜಾತಿ ಪ್ರಮಾಣ ಪತ್ರಗಳನ್ನು ಸಾರ್ವಜನಿಕರ ಮೊಬೈಲ್ ಸಂಖ್ಯೆಗಳೊಂದಿಗೆ ಲಿಂಕ್ ಮಾಡಲಾಗಿದ್ದು, ವಾಟ್ಸಾಪ್ ಅಥವಾ ಎಸ್ಎಂಎಸ್ ಮೂಲಕ ನೇರ ಲಿಂಕ್ ಕಳುಹಿಸಿ ಡೌನ್ಲೋಡ್ ಮಾಡಿಕೊಳ್ಳಲು ಕಲ್ಪಿಸಲಾಗಿದೆ.
ಅಲ್ಲದೆ, ಸಾರ್ವಜನಿಕರು ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಲು https://nadakacheri.karnataka.gov.in/AJSKCertificates ವಿಶೇಷ ವೆಬ್ಸೈಟ್ ಲಭ್ಯವಿದ್ದು, ಪ್ರತಿ ಹೋಬಳಿ ಮಟ್ಟದಲ್ಲಿ ಉಚಿತ ಮುದ್ರಣದ ಸಹಾಯ ಕೇಂದ್ರಗಳನ್ನು ಕೂಡ ಸ್ಥಾಪಿಸಲಾಗಿದೆ.
Bangalore [Bangalore],Bangalore,Karnataka














