Chicken Biryani: ಶಾಲಾ ಮಕ್ಕಳಿಗೆ ಚಿಕನ್ ಬಿರಿಯಾನಿ? ಮೆನು ಬದಲಾವಣೆಗೆ ಚಿಂತನೆ ನಡೆಸಿದ ವಿಜಯ್ ಸರ್ಕಾರ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಸಿಎಂ ವಿಜಯ್​


Last Updated:

ಬಿರಿಯಾನಿ ಪ್ರಸ್ತಾವನೆಗೆ ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿದರೆ, ಭಾರತದಲ್ಲೇ ಶಾಲಾ ಮಕ್ಕಳಿಗೆ ಚಿಕನ್ ಬಿರಿಯಾನಿ ಉಣಬಡಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ತಮಿಳುನಾಡು ಪಾತ್ರವಾಗಲಿದೆ.

ಸಿಎಂ ವಿಜಯ್​
ಸಿಎಂ ವಿಜಯ್​

ತಮಿಳುನಾಡು: ಸಿಎಂ ವಿಜಯ್ (CM Vijay) ನೇತೃತ್ವದ ತಮಿಳುನಾಡು (Tamil Nadu) ಸರ್ಕಾರ ತಮಿಳುನಾಡಿನ ಸರ್ಕಾರಿ ಶಾಲೆ (Government School) ಮಕ್ಕಳಿಗೆ ಗುಡ್‌ನ್ಯೂಸ್ ಕೊಡಲು ಮುಂದಾಗಿದೆ. ವಾರಕ್ಕೊಮ್ಮೆ ಮಧ್ಯಾಹ್ನದ ಬಿಸಿಯೂಟಕ್ಕೆ (Mid-Day Meal) ಚಿಕನ್ ಬಿರಿಯಾನಿ ನೀಡಲು ಚಿಂತನೆ ನಡೆಸಿದೆ. ತಮಿಳುನಾಡು ಶಾಲಾ ಶಿಕ್ಷಣ ಇಲಾಖೆಯ ಈ ನೂತನ ಯೋಜನೆ ಸದ್ಯ ದೇಶಾದ್ಯಂತ ಸದ್ದು ಮಾಡುತ್ತಿದೆ.

ಸರ್ಕಾರಿ ಶಾಲೆಗಳಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ?

ಸಾಮಾನ್ಯವಾಗಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲಬಾರದು ಎಂದು ಪೌಷ್ಟಿಕ ಆಹಾರಗಳನ್ನು ನೀಡಲಾಗುತ್ತದೆ. ಇದರಲ್ಲಿ ಮೊಟ್ಟೆ, ಬಾಳೆಹಣ್ಣು ಸೇರಿದಂತೆ ಉತ್ತಮವಾದ ಆಹಾರವನ್ನು ನೀಡಲಾಗುತ್ತದೆ. ಆದರೆ, ಮಕ್ಕಳಿಗೆ ಬಿಸಿಯೂಟ ನೀಡುವ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಇಟ್ಟಿರುವ ಸಿಎಂ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ, ತಮ್ಮ ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಮುಂದಾಗಿದೆ.

ಶಿಕ್ಷಣ ಸಚಿವರು ಹೇಳಿದ್ದೇನು?

ಈ ಪ್ರಸ್ತಾವನೆಯನ್ನು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಸಲ್ಲಿಸಲಾಗಿದ್ದು, ಪ್ರಸ್ತುತ ಈ ಪ್ರಸ್ತಾವನೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಎ. ರಾಜಮೋಹನ್ ಮಾಹಿತಿ ನೀಡಿದ್ದಾರೆ. ಈ ಪ್ರಸ್ತಾವನೆಯ ಕುರಿತು ಮಾತನಾಡಿದ ರಾಜಮೋಹನ್, ರಾಜ್ಯದ ಪ್ರತಿಯೊಂದು ಪ್ರಮುಖ ರಾಜಕೀಯ ಯುಗವು ಶಾಲಾ ಪೌಷ್ಟಿಕಾಂಶ ಕಾರ್ಯಕ್ರಮವನ್ನು ತನ್ನದೇ ಆದ ರೀತಿಯಲ್ಲಿ ಬಲಪಡಿಸಿದೆ ಎಂದು ಹೇಳಿದರು.
ಮುಂದುವರೆದು ಮಾತನಾಡಿರುವ ಎ. ರಾಜಮೋಹನ್ “ಜಸ್ಟಿಸ್ ಪಾರ್ಟಿ ಅವರು ಉಚಿತ ಊಟವನ್ನು ಪರಿಚಯಿಸಿದರು, ಕಾಮರಾಜ್ ಅವರು ಅದನ್ನು ಮಧ್ಯಾಹ್ನದ ಬಿಸಿಯೂಟ ಯೋಜನೆಯಾಗಿ ವಿಸ್ತರಿಸಿದರು, ಕರುಣಾನಿಧಿಯವರು ಮೊಟ್ಟೆಗಳನ್ನು ಸೇರಿಸಿದರು, ಎಂ.ಜಿ. ರಾಮಚಂದ್ರನ್ ಅವರು ಇದನ್ನು ಪೌಷ್ಟಿಕ ಆಹಾರ ಯೋಜನೆಯಾಗಿ ಪರಿವರ್ತಿಸಿದರು. ಜಯಲಲಿತಾ ಅವರು ಮೊಟ್ಟೆ ವಿತರಣೆಯನ್ನು ಮತ್ತಷ್ಟು ವಿಸ್ತರಿಸಿದರು. ಅದೇ ರೀತಿ, ವಾರಕ್ಕೊಮ್ಮೆ ಚಿಕನ್ ಬಿರಿಯಾನಿಯನ್ನು ಪರಿಚಯಿಸುವ ನನ್ನ ಇಚ್ಛೆಯನ್ನು ನಾನು ವ್ಯಕ್ತಪಡಿಸಿದ್ದೇನೆ ಎಂದು” ಎಂದು ಪಿಟಿಐಗೆ ಮಾಹಿತಿ ನೀಡಿದರು.

ಈ ಪ್ರಸ್ತಾವನೆಯು ಇನ್ನೂ ಪ್ರಾಥಮಿಕ ಹಂತದಲ್ಲಿದೆ ಮತ್ತು ಯಾವುದೇ ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚು ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಸೇರಿಸುವ ಮೂಲಕ ‘ಪೆರುಂತಲೈವರ್ ಕಾಮರಾಜರ್ ಉಪಹಾರ ಯೋಜನೆ’ಯ ಅಡಿಯಲ್ಲಿ ಬಿಸಿಯೂಟದ ಮೆನುವನ್ನು ನವೀಕರಿಸಲು ಸರ್ಕಾರವು ಪ್ರಯತ್ನಿಸುತ್ತಿದೆ ಎಂದು

ಈ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದ್ದೇ ಆದಲ್ಲಿ, ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವುದರಿಂದ ಇದು ಇತ್ತೀಚಿನ ವರ್ಷಗಳಲ್ಲಿ ರಾಜ್ಯದ ಪ್ರಮುಖ ಪೌಷ್ಟಿಕಾಂಶ ಯೋಜನೆಯಲ್ಲಿನ ಅತಿ ದೊಡ್ಡ ಮೆನು ಬದಲಾವಣೆಗಳಲ್ಲಿ ಒಂದಾಗಲಿದೆ. ಅಲ್ಲದೆ, ಮಕ್ಕಳ ಪೌಷ್ಟಿಕಾಂಶ, ಶಾಲೆಗೆ ಹಾಜರಾತಿ ಮತ್ತು ಕಲಿಕಾ ಫಲಿತಾಂಶಗಳನ್ನು ಸುಧಾರಿಸಲು ಶಾಲಾ ಊಟವನ್ನು ಬಳಸಿಕೊಳ್ಳುವ ತಮಿಳುನಾಡಿನ ಪರಂಪರೆಯನ್ನು ಇದು ಮುಂದುವರಿಸಲಿದೆ.

ಒಟ್ಟಾರೆಯಾಗಿ, ಈ ಬಿರಿಯಾನಿ ಪ್ರಸ್ತಾವನೆಗೆ ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿದರೆ, ಭಾರತದಲ್ಲೇ ಶಾಲಾ ಮಕ್ಕಳಿಗೆ ಚಿಕನ್ ಬಿರಿಯಾನಿ ಉಣಬಡಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ತಮಿಳುನಾಡು ಪಾತ್ರವಾಗಲಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed