CJP Protest-Dharmendra Pradhan: ಸಿಜೆಪಿ ಪ್ರತಿಭಟನೆ ತಾರಕಕ್ಕೇರಿದ ಬೆನ್ನಲ್ಲೇ ಕೊನೆಗೂ ಧರ್ಮೇಂದ್ರ ಪ್ರಧಾನ್ ಪ್ರತಿಕ್ರಿಯೆ! ಕೇಂದ್ರ ಶಿಕ್ಷಣ ಸಚಿವ ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಧರ್ಮೇಂದ್ರ ಪ್ರಧಾನ್


Last Updated:

Jantar Mantar Delhi Protest: ದೆಹಲಿ ಪ್ರತಿಭಟನೆ ಬಗ್ಗೆ ಕೊನೆಗೂ ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಏನು ಹೇಳಿದ್ರು?

ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್

ನೀಟ್ ಪರೀಕ್ಷೆ (NEET Exam) ಪ್ರಶ್ನೆ ಪತ್ರಿಕೆ ಲೀಕ್ ಕುರಿತು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನ ಮಳೆಗಾಲದ ಅಧಿವೇಶನವನ್ನು ಅಡ್ಡಿಪಡಿಸಲು ರಾಹುಲ್ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳನ್ನು (Students) “ರಾಜಕೀಯ ಸಾಧನಗಳಾಗಿ” ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸರ್ಕಾರ ಈ ವಿಷಯವನ್ನು ಚರ್ಚಿಸಲು ಉದ್ದೇಶಿಸಿದ್ದರೂ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸತ್ತಿನ ಚರ್ಚೆಗಿಂತ ಪ್ರತಿಭಟನೆಯನ್ನೇ ಆಯ್ಕೆ ಮಾಡಿವೆ ಎಂದು ಧರ್ಮೇಂದ್ರ ಪ್ರಧಾನ್ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ನಿವಾಸದ ಹೊರಗೆ ಪಕ್ಷವು ಧರಣಿ ನಡೆಸುತ್ತಿದೆ ಎಂದು ಅವರು ಆರೋಪಿಸಿದರು, ಇದು ಸಾರ್ವಜನಿಕರಿಗೆ ಅನಾನುಕೂಲತೆಯನ್ನುಂಟುಮಾಡಿದೆ ಮತ್ತು ಸ್ಥಾಪಿತ ಭದ್ರತಾ ಶಿಷ್ಟಾಚಾರಗಳನ್ನು ನಿರ್ಲಕ್ಷಿಸಿದೆ ಎಂದು ಹೇಳಿದರು.

ಮಳೆಗಾಲದ ಅಧಿವೇಶನದಲ್ಲಿ ಸಮಸ್ಯೆ ಸೃಷ್ಟಿಸಲು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಚಿಗೆಯೇ ಇಲ್ಲದೆ “ವಿದ್ಯಾರ್ಥಿಗಳನ್ನು ರಾಜಕೀಯ ಸಾಧನಗಳಾಗಿ ಬಳಸಿಕೊಳ್ಳುತ್ತಿರುವುದನ್ನು” ಮುಂದುವರೆಸಿದೆ ಎಂದು ಪ್ರಧಾನ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪ್ರಧಾನ ಮಂತ್ರಿಯವರ ನಿವಾಸದ ಹೊರಗೆ ನಡೆದ ಪ್ರತಿಭಟನೆಯು ಸಾರ್ವಜನಿಕರಿಗೆ ಅನಾನುಕೂಲತೆ ಉಂಟು ಮಾಡಿದೆ. ಸ್ಥಳದಲ್ಲಿದ್ದ ಭದ್ರತಾ ವ್ಯವಸ್ಥೆಗಳನ್ನು ಕೂಡಾ ನಿರ್ಲಕ್ಷಿಸಲಾಗಿದೆ ಎಂದು ಅವರು ಆರೋಪಿಸಿದರು.

ಈ ವಿಷಯದ ಬಗ್ಗೆ ಸಮಗ್ರ ಚರ್ಚೆಗೆ ಸರ್ಕಾರ ಈಗಾಗಲೇ ತನ್ನ ಸಿದ್ಧತೆ ಮಾಡಿದೆ. ಆದರೆ ಕಾಂಗ್ರೆಸ್ “ಪ್ರಜಾಪ್ರಭುತ್ವದ ಚರ್ಚೆಗಿಂತ ರಾಜಕೀಯ ಪ್ರದರ್ಶನಕ್ಕೆ ಒತ್ತು ನೀಡಿದೆ ಎಂದು ಸಚಿವರು ಹೇಳಿದರು.

ಧರ್ಮೇಂದ್ರ ಪ್ರಧಾನ್ ಅವರ ಪ್ರಕಾರ, ವಿರೋಧ ಪಕ್ಷದ ಉದ್ದೇಶವು ವಿದ್ಯಾರ್ಥಿಗಳಿಗೆ ಪರಿಹಾರ ಕೊಡುವುದಲ್ಲ. ಬದಲಾಗಿ “ರಾಜಕೀಯ ಕಲಾಪಕ್ಕೆ” ಅಡ್ಡಿಪಡಿಸುವುದಾಗಿತ್ತು ಎಂದಿದ್ದಾರೆ.

ಪ್ರತಿಭಟನೆಯ ಹಿಂದಿನ ರಾಹುಲ್ ಗಾಂಧಿಯವರ ಉದ್ದೇಶಗಳನ್ನು ಪ್ರಶ್ನಿಸಿದ ಸಚಿವರು ಇಲ್ಲಿ ವಿದ್ಯಾರ್ಥಿಗಳ ಬಗೆಗಿನ ಕಾಳಜಿಗಿಂತ ಘರ್ಷಣೆಯನ್ನು ಸೃಷ್ಟಿಸುವುದಕ್ಕೆ ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ.

ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು ಕೇಂದ್ರ ಸಿದ್ಧ

“ರಾಹುಲ್ ಗಾಂಧಿಗೆ, ಈ ಪ್ರತಿಭಟನೆ ವಿದ್ಯಾರ್ಥಿಗಳ ಬಗ್ಗೆ ಅಲ್ಲ. ಇದು ರಾಜಕೀಯ ಮುಖಾಮುಖಿಯ ಬಗ್ಗೆ” ಎಂದು ಅವರು ಪೋಸ್ಟ್‌ನಲ್ಲಿ ಹೇಳಿದ್ದಾರೆ. ನೀಟ್ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಲು ಮತ್ತು ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು ಕೇಂದ್ರವು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಕೇಂದ್ರ ಸಚಿವರು ಸಮರ್ಥಿಸಿಕೊಂಡರು.

ಹೊಣೆಗಾರಿಕೆಗೆ ಬದ್ಧ

“ನಮ್ಮ ವಿದ್ಯಾರ್ಥಿಗಳ ಆಕ್ರೋಶಕ್ಕಿಂತ ನಾವು ಅವರಿಗೆ ಉತ್ತರ, ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಹೊಣೆಗಾರಿಕೆಯನ್ನು ನೀಡಬೇಕಾಗಿದೆ. ನಮ್ಮ ಸರ್ಕಾರವು ಅದನ್ನು ನೀಡಲು ಬದ್ಧವಾಗಿದೆ” ಎಂದು ಪ್ರಧಾನ್ ಹೇಳಿದರು.

ಕನ್ನಡ ಸುದ್ದಿ/ ನ್ಯೂಸ್/ದೇಶ-ವಿದೇಶ/

CJP Protest-Dharmendra Pradhan: ಸಿಜೆಪಿ ಪ್ರತಿಭಟನೆ ತಾರಕಕ್ಕೇರಿದ ಬೆನ್ನಲ್ಲೇ ಕೊನೆಗೂ ಧರ್ಮೇಂದ್ರ ಪ್ರಧಾನ್ ಪ್ರತಿಕ್ರಿಯೆ! ಕೇಂದ್ರ ಶಿಕ್ಷಣ ಸಚಿವ ಹೇಳಿದ್ದೇನು?



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed