Last Updated:
ಕೌಟುಂಬಿಕ ಕಲಹದಲ್ಲಿ ಪತಿಯೊಬ್ಬರು ತಮ್ಮ ಪತ್ನಿಯನ್ನು ಹಾಡಹಗಲೇ ಗುಂಡಿಕ್ಕಿ ಕೊಂದಿದ್ದಾರೆ. ಅಲ್ಲದೇ ಅವರು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹ ಮತ್ತು ವಿಚ್ಛೇದನ ಪ್ರಕರಣ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮಹಿಳಾ ಬ್ಯಾಂಕ್ ಅಧಿಕಾರಿಯೊಬ್ಬರನ್ನು ಕೊಲೆ ಮಾಡಲಾಗಿದೆ. ಉತ್ತರ ಪ್ರದೇಶದ (Uttar Pradesh) ರಾಜಧಾನಿ ಲಕ್ನೋದ (Lucknow) ಐಷಾರಾಮಿ ಪ್ರದೇಶವಾದ ಗೋಮತಿ ನಗರದಲ್ಲಿ ಈ ಒಂದು ಭೀಕರ ಘಟನೆ ನಡೆದಿದೆ. ಇದು ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಕೌಟುಂಬಿಕ ಕಲಹ ಮತ್ತು ಜಗಳಗಳು ಒಂದೇ ಕುಟುಂಬದ ಮೂವರು ಸದಸ್ಯರ ದುರಂತ ಸಾವಿಗೆ ಕಾರಣವಾಗಿವೆ.














