Last Updated:
‘ಅಪರಾಧಕ್ಕೆ ಬಳಸಲಾದ ಖುಕ್ರಿಯನ್ನು ಮರುಪಡೆಯುವ ಪ್ರಯತ್ನಗಳು ನಡೆಯುತ್ತಿವೆ. ಮೃತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಮತ್ತು ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು: ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಯುವಕನೊಬ್ಬ ಮುಖಕ್ಕೆ ಕೇಕ್ ಹಚ್ಚಿಕೊಂಡಿದ್ದಕ್ಕೆ ಆತನನ್ನು ಕೊಲೆ ಮಾಡಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಮತ್ತು ಆತನ ಸಹೋದರನನ್ನು ಬಂಧಿಸಿದ್ದಾರೆ.
ಲೋವರ್ ರೂಪ್ ನಗರ ಪ್ರದೇಶದ ರಸ್ತೆಬದಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿತ್ತು. ಜಾನಿಪುರ ಪೊಲೀಸ್ ಠಾಣೆಯ ಪೊಲೀಸ್ ತಂಡವು ಅಪರಾಧ ನಡೆದ ಕೆಲವೇ ಗಂಟೆಗಳಲ್ಲಿ ಇಬ್ಬರನ್ನು ಬಂಧಿಸಿತು. ಪವನ್ ನಾಯರ್ (ಅಲಿಯಾಸ್ ಸಮೀರ್) ಕೊಲೆ ಆರೋಪಿ ನೀರಜ್ (ಅಲಿಯಾಸ್ ಅಂಶು) ಮತ್ತು ಆತನ ಸಹೋದರ ರೇಶು ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸೆಪ್ಟೆಂಬರ್ 17 ರಂದು ರಾತ್ರಿ 9 ಗಂಟೆ ಸುಮಾರಿಗೆ, ಜಾನಿಪುರ ಪೊಲೀಸ್ ಠಾಣೆಗೆ ಜಿಎಂಸಿ ಜಮ್ಮು ಪೊಲೀಸ್ ಠಾಣೆಯಿಂದ ಮಾಹಿತಿ ಬಂದಿದ್ದು, ಪವನ್ ಅವರನ್ನು ಅವರ ಸ್ನೇಹಿತರಾದ ಜಾನ್ ಸೂತ್ರ, ಗೌರವ್ ಸಿಂಗ್ ಮತ್ತು ಸುಗಂಧ್ ಭಟ್ಟಿ ಅವರು ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತಂದರು. ನಂತರ ವೈದ್ಯರು ಯುವಕ ಚಾಕುವಿನಿಂದ ಹಲ್ಲೆಗೊಳಗಾಗಿ ಸಾವನ್ನಪ್ಪಿದ್ದರಿಂದ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಕೇಕ್ ಕತ್ತರಿಸುವ ಸಮಾರಂಭದಲ್ಲಿ ಪವನ್ ನೀರಜ್ ಮುಖಕ್ಕೆ ಕೇಕ್ ಹಚ್ಚಿದ್ದರಿಂದ ಇಬ್ಬರ ನಡುವೆ ವಾಗ್ವಾದ ನಡೆಯಿತು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಇಬ್ಬರ ನಡುವಿನ ಜಗಳದ ನಂತರ, ಜಾನ್, ಗುರು ಮತ್ತು ಸುಗಂಧ್ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಆದರೆ, ನೀರಜ್ ಕೋಪಗೊಂಡು, ತನ್ನ ಬಳಿ ಇದ್ದ ಕುಕ್ರಿ (ಬಾಗಿದ ಚಾಕು) ವನ್ನು ಹೊರತೆಗೆದು, ಪವನ್ ಕುತ್ತಿಗೆಗೆ ಹೊಡೆದನು. ಗಂಭೀರ ಸ್ಥಿತಿಯಲ್ಲಿದ್ದ ಯುವಕನನ್ನು ಅವನ ಸ್ನೇಹಿತರು ತಕ್ಷಣ ಆಸ್ಪತ್ರೆಗೆ ಸಾಗಿಸಿದರು.
‘ಅಪರಾಧಕ್ಕೆ ಬಳಸಲಾದ ಖುಕ್ರಿಯನ್ನು ಮರುಪಡೆಯುವ ಪ್ರಯತ್ನಗಳು ನಡೆಯುತ್ತಿವೆ. ಮೃತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಮತ್ತು ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.














