Last Updated:
ಮೃತಳನ್ನು ಪ್ರಿಯಾಂಕಾ ಎಂದು ಗುರುತಿಸಲಾಗಿದ್ದು, ಮೂಲತಃ ನೋಯ್ಡಾದ ಸದೋಪುರ್ ಗ್ರಾಮದವಳು. ಆಕೆ ಮತ್ತು ಆರೋಪಿ ಕಾನ್ಸ್ಟೆಬಲ್ ಮನೀಶ್ 2022 ರಲ್ಲಿ ವಿವಾಹವಾದರು. ಆಕೆ ಅಶೋಕ್ ವಿಹಾರ್ನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನವದೆಹಲಿ: ದೆಹಲಿ ಪೊಲೀಸ್ ಪೇದೆಯೊಬ್ಬ ಪೂರ್ವ ದೆಹಲಿಯ ವಿನೋದ್ ನಗರ ಪ್ರದೇಶದಲ್ಲಿರುವ ತನ್ನ ನಿವಾಸದಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಂದು, ಆಕೆಯ ಶವವನ್ನು ರಸ್ತೆಬದಿಯಲ್ಲಿ ಎಸೆದು (Crime News) ಹೋಗಿರುವ ಘಟನೆ ನಡೆದಿದೆ.
ಘಟನೆಯ ನಂತರ ಆರೋಪಿ ಪೇದೆ ಮನೀಶ್ ಭಾಟಿ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸ್ ತಂಡಗಳು ಹುಡುಕಾಟ ನಡೆಸುತ್ತಿವೆ.
ಮೃತಳನ್ನು ಪ್ರಿಯಾಂಕಾ ಎಂದು ಗುರುತಿಸಲಾಗಿದ್ದು, ಮೂಲತಃ ನೋಯ್ಡಾದ ಸದೋಪುರ್ ಗ್ರಾಮದವಳು. ಆಕೆ ಮತ್ತು ಆರೋಪಿ ಕಾನ್ಸ್ಟೆಬಲ್ ಮನೀಶ್ 2022 ರಲ್ಲಿ ವಿವಾಹವಾದರು. ಆಕೆ ಅಶೋಕ್ ವಿಹಾರ್ನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಪ್ರಕರಣ ದಾಖಲಾಗಿದ್ದು, ಕೊಲೆಯ ಹಿಂದಿನ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಹಿಳೆಯನ್ನು ಅಲ್ಲಿಗೆ ಯಾರು ಕರೆತಂದರು ಮತ್ತು ಅಪರಾಧ ಹೇಗೆ ನಡೆದಿದೆ ಎಂಬುದನ್ನು ನಿರ್ಧರಿಸಲು ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ತಲೆಮರೆಸಿಕೊಂಡಿರುವ ಆರೋಪಿ ಕಾನ್ಸ್ಟೆಬಲ್ನನ್ನು ಆಟೋ ಕಳ್ಳತನ ವಿರೋಧಿ ದಳ (ಎಎಟಿಎಸ್)ದಲ್ಲಿ ನಿಯೋಜಿಸಲಾಗಿತ್ತು. ಸ್ಥಳದಲ್ಲಿದ್ದ ಕೆಲವು ಯುವಕರು, ಒಬ್ಬ ವ್ಯಕ್ತಿ ಮೋಟಾರ್ ಸೈಕಲ್ನಲ್ಲಿ ಬಂದು ಮಹಿಳೆಯನ್ನು ರಸ್ತೆಯ ಪಕ್ಕದಲ್ಲಿ ಎಸೆದು ಹೋಗುವುದನ್ನು ನೋಡಿದ್ದೇವೆ ಎಂದು ಹೇಳಿದರು. ಆಕೆ ನೋವಿನಿಂದ ನರಳುತ್ತಿರುವುದನ್ನು ನೋಡಿ, ಅವರು ಆಕೆಗೆ ನೀರು ತರಲು ಹೋಗಿದ್ದರು.
ಗುಂಡಿನ ದಾಳಿಗೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಪ್ರಾಥಮಿಕ ತನಿಖೆಗಳು ಕೊಲೆ ಮತ್ತು ಶವ ಎಸೆಯುವಿಕೆಯ ಪ್ರಕರಣವನ್ನು ಸೂಚಿಸುತ್ತಿವೆ. ಪೊಲೀಸರು ಘಟನೆಯ ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದಾರೆ. ಮೃತರನ್ನು ಗುರುತಿಸಲು ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ತಾಂತ್ರಿಕ ಪುರಾವೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿ ಹೇಳಿದರು.
ಪ್ರಿಯಾಂಕಾ ಅವರ ತಂದೆ ಅಜಿತ್ ಸಿಂಗ್ ಅವರು ತಮ್ಮ ಮಗಳು ಮದುವೆಯಾದಾಗಿನಿಂದಲೂ ವರದಕ್ಷಿಣೆಗಾಗಿ ಕಿರುಕುಳ ಅನುಭವಿಸುತ್ತಿದ್ದಳು ಎಂದು ಆರೋಪಿಸಿದ್ದಾರೆ. ಈ ವಿಷಯದ ಬಗ್ಗೆ ಮಹಿಳಾ ಘಟಕದಲ್ಲಿ ದೂರು ದಾಖಲಾಗಿತ್ತು, ಆದರೆ ನಂತರ ಎರಡೂ ಕಡೆಯವರ ನಡುವೆ ರಾಜಿ ಮಾಡಿಕೊಳ್ಳಲಾಯಿತು. ‘ಮದುವೆಯಾದಾಗಿನಿಂದ ಮನೀಶ್ ಭಾಟಿ 50 ಲಕ್ಷ ರೂ. ಮೌಲ್ಯದ ಕಾರಿಗೆ ಬೇಡಿಕೆ ಇಡುತ್ತಿದ್ದರು. ಪ್ರಿಯಾಂಕಾ ಹತ್ಯೆಯಲ್ಲಿ ಅವರ ತಾಯಿ ಮತ್ತು ಅಣ್ಣ ಕೂಡ ಭಾಗಿಯಾಗಿದ್ದಾರೆ’ ಎಂದು ಅವರು ಹೇಳಿದರು.
New Delhi,Delhi














