Last Updated:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿ ಸಂಖ್ಯೆ 14 ಆಗಿರುವ ಪ್ರದೋಶ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿ ಇದೀಗ ನ್ಯಾಯಾಲಯದ ಮುಂದಿದ್ದು, ನಾಳೆ (ಆಗಸ್ಟ್ 10) ರಂದು ನಡೆಯಲಿರುವ ವಿಚಾರಣೆ ಮೇಲೆ ಎಲ್ಲರ ಗಮನ ನೆಟ್ಟಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿ 14 ಆಗಿರುವ ಪ್ರದೋಶ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿ ಇದೀಗ ನ್ಯಾಯಾಲಯದ ಮುಂದಿದ್ದು, ನಾಳೆ (ಆಗಸ್ಟ್ 10) ರಂದು ನಡೆಯಲಿರುವ ವಿಚಾರಣೆ ಮೇಲೆ ಎಲ್ಲರ ಗಮನ ನೆಟ್ಟಿದೆ. ಮಾಫಿ ಸಾಕ್ಷಿ ವಿಚಾರದಲ್ಲಿ ನ್ಯಾಯಾಲಯ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ನಾಳೆಯ ವಿಚಾರಣೆ ನಟ ದರ್ಶನ್ ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳ ಪಾಲಿಗೆ ಬಿಗ್ ಡೇ ಅಂತಾನೇ ಹೇಳಬಹುದು.














