Last Updated:
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದ ಗೌರವ್ ಶೆಟ್ಟಿ (Gaurav Shetty) ಇದೀಗ ಮಂಗಳೂರಿನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಜೊತೆ ಕಾಣಿಸಿಕೊಂಡಿರುವುದು ಚರ್ಚೆಗೆ ಕಾರಣವಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಜಯಲಕ್ಷ್ಮಿಯನ್ನು ಗೌರವ್ ಶೆಟ್ಟಿ ಸ್ವಾಗತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೊಲೀಸರ ತನಿಖೆಯ ನಡುವೆಯೇ ಈ ಬೆಳವಣಿಗೆ ನಡೆದಿದೆ.














