Last Updated:
ಪಟ್ಟೆ ತಲೆ ಹೆಬ್ಬಾತುಗಳನ್ನು ತಾವು ಸಾಕಿಲ್ಲ ಎಂಬುದು ಅರ್ಜಿದಾರರ ವಾದವಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ರದ್ದುಪಡಿಸುವಂತೆ ಮನವಿ ಮಾಡಲಾಗಿದೆ.
ಪಟ್ಟೆ ತಲೆ ಹೆಬ್ಬಾತುಗಳ ಪ್ರಕರಣ ಇದೀಗ ನಟ ದರ್ಶನ್ (Darshan) ಗೆ ಮತ್ತೊಂದು ಕಾನೂನು ಸಂಕಷ್ಟ ತಂದಿಟ್ಟಿದೆ. ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿರುವ ದರ್ಶನ್ ಫಾರ್ಮ್ಹೌಸ್ನಲ್ಲಿ ನಾಲ್ಕು ಪಟ್ಟೆ ತಲೆ ಹೆಬ್ಬಾತುಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪತ್ನಿ ವಿಜಯಲಕ್ಷ್ಮಿ (Vijayalakshmi) ಹಾಗೂ ಫಾರ್ಮ್ಹೌಸ್ ವ್ಯವಸ್ಥಾಪಕ ನಾಗರಾಜ್ ಗೆ ಕೋರ್ಟ್ ಸಮನ್ಸ್ ಜಾರಿಯಾಗಿತ್ತು . ಈ ಸಮನ್ಸ್ ಪ್ರಶ್ನಿಸಿ ಮೂವರೂ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪಟ್ಟೆ ತಲೆ ಹೆಬ್ಬಾತುಗಳನ್ನು ತಾವು ಸಾಕಿಲ್ಲ, ಅವು ಫಾರ್ಮ್ಗೆ ಹೇಗೆ ಬಂದವು ಎಂಬುದೇ ತಮಗೆ ತಿಳಿದಿರಲಿಲ್ಲ ಎಂಬುದು ಅರ್ಜಿದಾರರ ವಾದವಾಗಿದೆ.














