Darshan: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್! ಅದೊಂದು ಆದೇಶ ಮಾರ್ಪಾಡು ಮಾಡುವಂತೆ ‘ದಾಸ’ನ ಮನವಿ! | | ACTPnews

ನಟ ದರ್ಶನ್​


Last Updated:

ಆದೇಶ ಮಾರ್ಪಾಡು ಮಾಡುವಂತೆ ದರ್ಶನ್ ಅರ್ಜಿ ಸಲ್ಲಿಸಿದ್ದು, ಈ ಮೂಲಕ ಜಾಮೀನು ಕೋರದಿದ್ದರೂ, ಭವಿಷ್ಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಮಾರ್ಗ ಕಂಡು ಕೊಳ್ಳಲು ನಟ ದರ್ಶನ್ ಪ್ರಯತ್ನಿಸುತ್ತಿದ್ದಾರೆ.

ನಟ ದರ್ಶನ್​
ನಟ ದರ್ಶನ್​

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಕೇಸ್​ನಲ್ಲಿ ನಟ ದರ್ಶನ್ (Darshan)​​ ಪರಪ್ಪನ ಅಗ್ರಹಾರ ಸೇರಿದ್ದಾರೆ. ಈ ಕೇಸ್​​ಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ (Supreme Court)​ ಒಂದು ವರ್ಷದಲ್ಲಿ ಮುಗಿಸುವಂತೆ ನಿರ್ದೇಶನ ನೀಡಿದೆ. ಹೀಗಾಗಿ ದರ್ಶನ್​​ ಒಂದು ವರ್ಷಗಳ ಕಾಲ ಜೈಲಲ್ಲಿರೋದು ಫಿಕ್ಸ್​ ಆಗಿದೆ. ನಿನ್ನೆ ಅಷ್ಟೇ ನಟ ದರ್ಶನ್ ಪರ ವಕಾಲತ್ತಿನಿಂದ ವಕೀಲ ಸುನೀಲ್ ನಿವೃತ್ತಿ ಬಯಸಿದ್ರು. ದರ್ಶನ್ ಪರ ವಕಾಲತ್ತು ವಹಿಸಲ್ಲ ಅಂತ 59ನೇ ಸಿಸಿಹೆಚ್‌ ಕೋರ್ಟ್‌ಗೆ ಮೆಮೋ ಸಲ್ಲಿಸಿದ್ರು. ಸದ್ಯ ದರ್ಶನ್​ ಕೇಸನ್ನು ವಕೀಲ ಹಷ್ಮತ್ ಪಾಷಾ ಮುನ್ನಡೆಸುತ್ತಿದ್ದು, ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಅರ್ಜಿಯಲ್ಲಿ ಏನಿದೆ?

ಸುಪ್ರೀಂ ಕೋರ್ಟ್ ಆದೇಶ ಮಾರ್ಪಾಡು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್​ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್​ ಪರ ವಕೀಲ ಹಷ್ಮತ್ ಪಾಷಾ  ತಂಡ ನಿನ್ನೆ ಸುಪ್ರೀಂಕೋರ್ಟ್​ಗೆ ಪಿಟಿಷನ್ ಸಲ್ಲಿಕೆ ಮಾಡಿದೆ. ಒಂದು ವರ್ಷದ ಬಳಿಕವಷ್ಟೇ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸುಪ್ರೀಂಕೋರ್ಟ್ ಆದೇಶಿಸಿತ್ತು. ಈ ಆದೇಶದಲ್ಲಿ ಮಾರ್ಪಾಡು ಮಾಡಲು ನಟ ದರ್ಶನ್ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ನಟ ದರ್ಶನ್​​ ಮನವಿಗಳೇನು?

ಒಂದು ವರ್ಷದೊಳಗೆ ಯಾವುದೇ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ಈ ಆದೇಶದಿಂದ ಟ್ರಯಲ್ ಇನ್ನಷ್ಟು ವಿಳಂಬವಾಗಬಹುದು. ವೈದ್ಯಕೀಯ ತುರ್ತು ಪರಿಸ್ಥಿತಿ ಮತ್ತು ಮಾನವೀಯ ನೆಲೆಗಳಲ್ಲಿ ಜಾಮೀನು ಪಡೆಯಲು ಸಾಧ್ಯವಾಗುವುದಿಲ್ಲ. ನನ್ನ ದೀರ್ಘಾವಧಿಯ ಬಂಧನವನ್ನು ಪರಿಗಣಿಸಬೇಕು. ವೈಯಕ್ತಿಕ ಸ್ವಾತಂತ್ರ್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಸಂವಿಧಾನದ ಆರ್ಟಿಕಲ್ 21 ಅಡಿಯಲ್ಲಿ ರಕ್ಷಿತವಾಗಿದೆ. ದೀರ್ಘಾವಧಿಯ ಬಂಧನವನ್ನು  ನ್ಯಾಯಾಲಯ ಪರಿಶೀಲಿಸಬೇಕು.

ಜಾಮೀನು ಅರ್ಜಿ ಸಲ್ಲಿಸಲು ಮಾರ್ಗ ಕಂಡುಕೊಳ್ಳಲು ಪ್ರಯತ್ನ

ದೀರ್ಘ ಬಂಧನದಿಂದ ತಮ್ಮ ವೃತ್ತಿಜೀವನ, ಜೀವನೋಪಾಯ ಮತ್ತು ಕುಟುಂಬಕ್ಕೆ ತೀವ್ರ ಹಾನಿಯಾಗಿದೆ. ತಾಯಿಯ ಗಂಭೀರ ಆರೋಗ್ಯ ಸಮಸ್ಯೆ ಹೊಂದಿದ್ದಾರೆ. ಒಂದು ವರ್ಷ ಜಾಮೀನು ನೀಡದಿರುವ ಆದೇಶ ವ್ಯಾಪಕ ಪರಿಣಾಮ ಬೀರಬಹುದು. ಹೀಗಾಗಿ ಒಂದು ವರ್ಷದ ತನಕ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ನೀಡಿರುವ ಆದೇಶ ಮಾರ್ಪಾಡು ಮಾಡಬೇಕು ಎಂದು ನಟ ದರ್ಶನ್ ಮನವಿ ಮಾಡಿದ್ದು, ಈ ಮೂಲಕ ಜಾಮೀನು ಕೋರದಿದ್ದರೂ, ಭವಿಷ್ಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಮಾರ್ಗ ಕಂಡುಕೊಳ್ಳಲು ನಟ ದರ್ಶನ್ ಪ್ರಯತ್ನಿಸುತ್ತಿದ್ದಾರೆ.

(ವರದಿ: ಗಂಗಾಧರ್​ ವಾಗಟ, ನ್ಯೂಸ್​18 ಕನ್ನಡ, ಬೆಂಗಳೂರು)



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed