Last Updated:
ನ್ಯಾ. ವಿ. ಶ್ರೀಶಾನಂದ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆದಿದ್ದು, ದರ್ಶನ್ ಖುದ್ದು ಹಾಜರಾತಿಗೆ ಸಂಬಂಧಪಟ್ಟಂತೆ ಹೈಕೋರ್ಟ್ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಜೊತೆಗೆ ಕೆಲ ಸಲಹೆಗಳನ್ನು ಸಹ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.
ಬೆಂಗಳೂರು: ದರ್ಶನ್ ಅಂಡ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ಗೆ (Renukaswamy Murder Case) ಸಂಬಂಧಿಸಿದಂತೆ ಖುದ್ದು ಹಾಜರಾತಿಗೆ ನಿರ್ದೇಶನ ಕೋರಿ ಹೈಕೋರ್ಟ್ಗೆ (High Court) ದರ್ಶನ್ ಅರ್ಜಿ ಸಲ್ಲಿಸಿದ್ದರು. ಇಂದು ನ್ಯಾ. ವಿ. ಶ್ರೀಶಾನಂದ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆದಿದ್ದು, ದರ್ಶನ್ (Darshan) ಖುದ್ದು ಹಾಜರಾತಿಗೆ ಸಂಬಂಧಪಟ್ಟಂತೆ ಹೈಕೋರ್ಟ್ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.














