Last Updated:
ಪ್ರಜ್ವಲ್ ಬ್ಯಾರಕ್ ಜೊತೆ ನಟ ದರ್ಶನ್ ಬ್ಯಾರಕ್ಗೂ ಡಿಜಿಪಿ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಅಲೋಕ್ ಕುಮಾರ್ ತರಾಟೆಗೆ ತೆಗೆದುಕೊಂಡಿದ್ದು, ಲಾಸ್ಟ್ ವಾರ್ನಿಂಗ್ ಕೊಟ್ಟಿದ್ದಾರೆ.
ಬೆಂಗಳೂರು (ಆ.15): ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಕೈದಿಗಳ ಪಾಲಿಗೆ ಸೆರೆಮನೆಯಾಗೋ ಬದಲು ಅರಮನೆ ಆಗ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇದರ ನಡುವೆಯೇ ಕೈದಿ ಪ್ರಜ್ವಲ್ ರೇವಣ್ಣ (Prajwal Revanna) ಬ್ಯಾರಕ್ನಲ್ಲಿ ಮೊಬೈಲ್ ಪತ್ತೆಯಾಗಿದ್ದು, ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಈ ಘಟನೆ ಬಳಿಕ ನಿನ್ನೆ (ಆ.14) ಡಿಜಿಪಿ ಅಲೋಕ್ ಕುಮಾರ್ (Alok Kumar) ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ರು. ನಟ ದರ್ಶನ್ (Actor Darshan) ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರ ಬ್ಯಾರಕ್ಗೂ ತೆರಳಿ ತಪಾಸಣೆ ನಡೆಸಿದ್ದು, ಜೊತೆಗೆ ಪ್ರಜ್ವಲ್ ರೇವಣ್ಣ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.














