Delhi Protest: ಜಂತರ್ ಮಂತರ್ ಪ್ರತಿಭಟನೆ ಅಂತ್ಯಗೊಳಿಸಿದ ಸಿಜೆಪಿ! ಕೇಂದ್ರದ ಮುಂದೆ ಇಟ್ಟ ಬೇಡಿಕೆಗಳೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಜಂಟಿ ಸುದ್ದಿಗೋಷ್ಠಿ


Last Updated:

ದೆಹಲಿಯಲ್ಲಿ ಕೇಂದ್ರ ಸಚಿವರ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕಾಕ್ರೋಚ್ ಪಾರ್ಟಿ ವಕ್ತಾರರು, ತಮ್ಮ 37 ದಿನಗಳ ಪ್ರತಿಭಟನೆಯನ್ನು ಅಂತ್ಯಗೊಳಿಸುವುದಾಗಿ ತಿಳಿಸಿದ್ದಾರೆ.

ಜಂಟಿ ಸುದ್ದಿಗೋಷ್ಠಿ
ಜಂಟಿ ಸುದ್ದಿಗೋಷ್ಠಿ

ದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan)​ ರಾಜೀನಾಮೆ ಬೆನ್ನಲ್ಲೇ ಕಾಕ್ರೋಚ್​ ಜನತಾ ಪಾರ್ಟಿ (Cockroach Janata Party) ತನ್ನ ಪ್ರತಿಭಟನೆಯನ್ನು ಅಂತ್ಯಗೊಳಿಸಲು ನಿರ್ಧರಿಸಿದೆ. ದೆಹಲಿಯಲ್ಲಿ (Delhi) ಕೇಂದ್ರ ಸಚಿವರ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕಾಕ್ರೋಚ್​ ಪಾರ್ಟಿ ವಕ್ತಾರರು, ತಮ್ಮ 37 ದಿನಗಳ ಪ್ರತಿಭಟನೆಯನ್ನು ಅಂತ್ಯಗೊಳಿಸುವುದಾಗಿ ತಿಳಿಸಿದ್ದಾರೆ.

ಇನ್ನು, ಸಿಜೆಪಿ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಮನ್ನಣೆ ನೀಡಿದ್ದು, ಸಿಜೆಪಿ ಬೇಡಿಕೆಗಳನ್ನ ಪೂರೈಸಲು ಒಪ್ಪಿಗೆ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿಗಳ ಮೇಲೆ ಹಾಕಿರುವ ಕೇಸ್‌ ರದ್ದಿಗೆ ಒಪ್ಪಿಗೆ ಸೂಚಿಸಿರುವ ಕೇಂದ್ರ ಸರ್ಕಾರ ಎಫ್‌ಐಆರ್ ದಾಖಲಿಸಲ್ಲ ಅಂತ ಸ್ಪಷ್ಟಪಡಿಸಿದೆ. ಜೊತೆಗೆ ನಿಯಮಗಳನ್ನ ಪರಿಶೀಲಿಸಿ ಪರಿಹಾರ ಮೊತ್ತ ನಿಗದಿ ಮಾಡುವುದಾಗಿ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಭರವಸೆ ನೀಡಿದ್ದು, ತಕ್ಷಣದಿಂದಲೇ ಜಂತರ್‌ ಮಂತರ್‌ ಪ್ರತಿಭಟನೆ ಅಂತ್ಯಗೊಳಿಸುವುದಾಗಿ ಸಿಜೆಪಿ ವಕ್ತಾರ ಸೌರವ್​ ದಾಸ್​ ಘೋಷಣೆ ಮಾಡಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports