Dinesh Karthik: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಮೌನ ಮುರಿದ RCB ಕೋಚ್! ಹೇಳಿದ್ದೇನು ಗೊತ್ತಾ? | ಕ್ರೀಡಾ ಸುದ್ದಿ | ACTPnews

ಧರ್ಮೇಂದ್ರ ಪ್ರಧಾನ್-ದಿನೇಶ್ ಕಾರ್ತಿಕ್


Last Updated:

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯ ನಂತರ ಭಾರತದ ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಮೌನ ಮುರಿದಿದ್ದಾರೆ. ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

ಧರ್ಮೇಂದ್ರ ಪ್ರಧಾನ್-ದಿನೇಶ್ ಕಾರ್ತಿಕ್
ಧರ್ಮೇಂದ್ರ ಪ್ರಧಾನ್-ದಿನೇಶ್ ಕಾರ್ತಿಕ್

ಜುಲೈ 25ರಂದು ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ದೇಶದಾದ್ಯಂತ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ, ಕಳೆದ ಒಂದು ತಿಂಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನಿರಂತರ ಧರಣಿ ನಡೆಸುತ್ತಿತ್ತು. ಇದರಿಂದಾಗಿ ಕೊನೆಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.

ಈಗ ದೇಶದಾದ್ಯಂತ ಇದಕ್ಕೆ ಪ್ರತಿಕ್ರಿಯೆಗಳು ಬರುತ್ತಿವೆ. ಭಾರತದ ಮಾಜಿ ವಿಕೆಟ್‌ಕೀಪರ್-ಬ್ಯಾಟರ್ ಮತ್ತು ಆರ್​​ಸಿಬಿ ಬ್ಯಾಟಿಂಗ್ ಕೋಚ್ ಆಗಿರುವ ದಿನೇಶ್ ಕಾರ್ತಿಕ್ ಕೂಡ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದಿನೇಶ್ ಕಾರ್ತಿಕ್ ಅವರು ಸೋಷಿಯಲ್ ಮೀಡಿಯಾದಲ್ಲಿ ವಿದ್ಯಾರ್ಥಿಗಳನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದಾರೆ. “ಅಂತಿಮವಾಗಿ ನಾವೆಲ್ಲರೂ ಉತ್ತಮ ಭಾರತಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಯುವಕರ ಸ್ಪಷ್ಟ ಯೋಚನೆ, ಒಬ್ಬರಿಗೊಬ್ಬರು ಸಹಾಯ ಮಾಡುವುದು ಮತ್ತು ಆಯಾಸವಿಲ್ಲದೆ ಮಾಡುವ ಪ್ರಯತ್ನಗಳು ನನ್ನ ಮೇಲೆ ತುಂಬಾ ಪರಿಣಾಮ ಬೀರಿವೆ. ಭವಿಷ್ಯ ಚೆನ್ನಾಗಿದೆ. ಮುಂದಿನ ತಲೆಮಾರು ನಮ್ಮನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುತ್ತದೆ.” ಎಂದು ಬರೆದುಕೊಂಡಿದ್ದಾರೆ.

ವಿದ್ಯಾರ್ಥಿಗಳಿಗೆ ಶುಭಮನ್ ಗಿಲ್ ಬೆಂಬಲ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಮಾಡುವ ಮೊದಲು, ಶುಭಮನ್ ಗಿಲ್ ವಿದ್ಯಾರ್ಥಿಗಳನ್ನು ಬೆಂಬಲಿಸಿದ್ದರು.  ಅವರು ಯುವಕರನ್ನು ದೇಶದ ಭವಿಷ್ಯ ಎಂದು ಹೇಳಿದರು. “ನಾನು ಒಬ್ಬ ಯುವ ಭಾರತೀಯ. ನಮ್ಮ ಪೀಳಿಗೆ ಕಲಿಯಲು, ಕನಸು ಕಾಣಲು ಮತ್ತು ಭವಿಷ್ಯವನ್ನು ರೂಪಿಸಲು ಎಲ್ಲಾ ಅವಕಾಶಗಳಿಗೆ ಅರ್ಹರು ಎಂದು ನಾನು ನಂಬುತ್ತೇನೆ.

ಶಾಂತಿಯಿಂದ ತಮ್ಮ ಅಭಿಪ್ರಾಯ ಹೇಳುವ ಎಲ್ಲಾ ಯುವರನ್ನು ನಾನು ಗೌರವಿಸುತ್ತೇನೆ. ಶಿಕ್ಷಣವು ನಮ್ಮ ದೇಶದ ಭವಿಷ್ಯವನ್ನು ರೂಪಿಸುವ ದೊಡ್ಡ ಶಕ್ತಿ. ನಾವು ಸಹಾನುಭೂತಿ, ಪರಸ್ಪರ ಗೌರವ ಮತ್ತು ಪ್ರತಿ ವಿದ್ಯಾರ್ಥಿಯ ಹಿತವನ್ನು ಮೊದಲು ಇಟ್ಟು ಮುಂದುವರಿಯೋಣ ಎಂದು ನಾನು ಅಂದುಕೊಂಡಿದ್ದೇನೆ.” ಎಂದು ಗಿಲ್ ತಮ್ಮ ಪೋಸ್ಟ್​​ನಲ್ಲಿ ಬರೆದುಕೊಂಡಿದ್ದರು.

ಭಾರತದ ಮಾಜಿ ಆಟಗಾರರಾದ ಸಚಿನ್ ತೆಂಡೂಲ್ಕರ್ ಮತ್ತು ಯುವರಾಜ್ ಸಿಂಗ್ ಕೂಡ ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಇಬ್ಬರೂ ದಿಗ್ಗಜರು ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟಿಸುವಂತೆ ಒತ್ತಾಯಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed