Last Updated:
ತಮಿಳುನಾಡು ಸಿಎಂ ವಿಜಯ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಈ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರು ಕಾವೇರಿ ನೀರಿನ ಬಗ್ಗೆ ಕರ್ನಾಟಕದ ಪ್ರತಿನಿಧಿಯಾಗಿ ವಾದ ಮಂಡಿಸಿದ್ರು..
ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Sha) ಅವರ ಅಧ್ಯಕ್ಷತೆಯಲ್ಲಿ ಇಂದು ಚೆನ್ನೈಯ ಮಹಾಬಲಿಪುರಂನಲ್ಲಿ ದಕ್ಷಿಣ ರಾಜ್ಯಗಳ 31ನೇ ದಕ್ಷಿಣ ವಲಯ ಮಂಡಳಿ ಸಭೆ ನಡೆದಿದೆ. ಸಭೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್ (Vijay) ಅವರು ಅಕ್ಕ-ಪಕ್ಕದಲ್ಲೇ ಕುಳಿತು ಗಮನ ಸೆಳೆದಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಾವೇರಿ ನೀರು ಹಂಚಿಕೆ (Cauvery Issue) ವಿಚಾರವನ್ನ ಪ್ರಸ್ತಾಪ ಮಾಡಿದ್ದಾರೆ ಎಂದು ತಿಳಿದು ಬಂದಿದೆ.














