Karnataka
oi-Gururaj S
ಬೆಂಗಳೂರು, ಜೂನ್ 30: ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 7ರಂದು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಇದು ಅವರು ಮಂಡನೆ ಮಾಡಲಿರುವ 14ನೇ ಬಜೆಟ್ ಆಗಿದೆ. ಈ ಮೂಲಕ ಅತಿ ಹೆಚ್ಚು ಬಜೆಟ್ ಮಂಡಿಸಿದ ಹೆಗ್ಗಳಿಕೆಯನ್ನು ಸಹ ಅವರು ಪಡೆಯಲಿದ್ದಾರೆ. ಕಾಂಗ್ರೆಸ್ ಘೋಷಣೆ ಮಾಡಿರುವ 5 ಗ್ಯಾರಂಟಿಗಳ ಹಿನ್ನಲೆಯಲ್ಲಿ ಬಜೆಟ್ ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿಗಳನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಅಭಿನಂದನೆ ಸಲ್ಲಿಕೆ ಮಾಡಿದರು. ಬಜೆಟ್ ಮಂಡನೆ ಮಾಡಲಿರುವ ಹಿನ್ನಲೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಮನವಿಯನ್ನು ಸಲ್ಲಿಕೆ ಮಾಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಲು ಬಜೆಟ್ನಲ್ಲಿ ಅನುದಾನ ಕಾಯ್ದಿರಿಸುವುದು. OPS ಯೋಜನೆಯನ್ನು ಜಾರಿಗೊಳಿಸುವುದು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಮನವಿಯನ್ನು ಸಲ್ಲಿಸಿದರು.
ಅಲ್ಲದೇ ಸರ್ಕಾರಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಸಂಬಂಧಿಸಿದಂತೆ 16ಎ ನಿಯಮಗಳಿಗೆ ತಿದ್ದುಪಡಿ ಮಾಡಿ ವರ್ಗಾವಣೆಗೆ ಅವಕಾಶ ಕಲ್ಪಿಸುವ ಕುರಿತು ಮನವಿ ಮಾಡಿದರು. ಸಂಘದ ಬೇಡಿಕೆಗಳಿಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
English summary
Karnataka chief minister and finance minister Siddaramaiah will present 2023-24 budget on July 7. Here are the government employees expectations.
Story first published: Friday, June 30, 2023, 13:58 [IST]