Last Updated:
ಚಿತ್ರದ ಯಶಸ್ಸಿನ ಬೆನ್ನಲ್ಲೇ ಹನುಮಾನ್ ಅಂಶ್ ಚಿತ್ರತಂಡ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ಭೇಟಿಯಾಗಿದೆ. ಲಖನೌನಲ್ಲಿ ನಡೆದ ಈ ವಿಶೇಷ ಭೇಟಿಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿವೆ.
ಚಿತ್ರಮಂದಿರಗಳಲ್ಲಿ ಅಚ್ಚರಿಯ ಯಶಸ್ಸು ಕಂಡಿರುವ ಹನುಮಾನ್ ಅಂಶ್ (Hanuman Ansh) ಸಿನಿಮಾ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ದೈವಿಕ ಹಾಗೂ ಆಧ್ಯಾತ್ಮಿಕ ಹಿನ್ನೆಲೆಯ ಕಥೆಯನ್ನು ಹೊಂದಿರುವ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಪ್ರೇಕ್ಷಕರಿಂದಲೂ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಚಿತ್ರದ ಯಶಸ್ಸಿನ ಬೆನ್ನಲ್ಲೇ ಹನುಮಾನ್ ಅಂಶ್ ಚಿತ್ರತಂಡ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ಭೇಟಿಯಾಗಿದೆ. ಲಖನೌನಲ್ಲಿ ನಡೆದ ಈ ವಿಶೇಷ ಭೇಟಿಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿವೆ.














