Last Updated:
ದೂರಿನ ಮೇರೆಗೆ ಹೈಕೋರ್ಟ್ ವಕೀಲೆ ದಯೀನಾಬಾನು ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 318 (4) (ವಂಚನೆ) ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಆಕೆಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸುತ್ತೇನೆ ಎಂದು ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ವಕೀಲೆಯೊಬ್ಬರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಕೀಲೆ ದಯೀನಾಬಾನು ಎಂಬುವವರೇ ಈ ಪ್ರಕರಣದ ಆರೋಪಿಯಾಗಿದ್ದಾರೆ. ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸುವುದಾಗಿ ನ್ಯಾಯಮೂರ್ತಿಯ ಹೆಸರು ದುರ್ಬಳಕೆ ಮಾಡಿಕೊಂಡು ಆರೋಪಿಯ ತಾಯಿಯಿಂದ ಹಣ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಪ್ರಕರಣ ಸಂಬಂಧ ಹೈಕೋರ್ಟ್ನ ಕಾನೂನು ವಿಭಾಗದ ಜಂಟಿ ರಿಜಿಸ್ಟ್ರಾರ್ ಎಂ.ರಾಜೇಶ್ವರಿ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.
ದೂರಿನ ಮೇರೆಗೆ ಹೈಕೋರ್ಟ್ ವಕೀಲೆ ದಯೀನಾಬಾನು ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 318 (4) (ವಂಚನೆ) ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಆಕೆಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ವರದಿ: ಮಂಜುನಾಥ್ ನ್ಯೂಸ್ 18 ಕನ್ನಡ, ಬೆಂಗಳೂರು)
ಸಾಲ ಕೊಡುವುದಾಗಿ ಹೊಟೆಲ್ಗೆ ಕರೆಸಿ ಅತ್ಯಾಚಾರ ಆರೋಪ; ಜಿಮ್ ಸೋಮನ ವಿರುದ್ದ FIR
ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಜಿಮ್ ಸೋಮನ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.
ಜಿಮ್ ಸೋಮ ಯುವತಿಯೊಬ್ಬಳನ್ನು ಸಾಲ ಕೊಡುವುದಾಗಿ ಲ್ಯಾಂಗ್ ಪೋರ್ಡ್ ರಸ್ತೆಯ ಹೊಟೇಲ್ಗೆ ಕರೆಸಿ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.
ಬಿಜೆಪಿಯಿಂದ ಈ ಹಿಂದೆ ಸಕಲೇಶಪುರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದನು. ಇತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಸದ್ಯ ಅಶೋಕನಗರ ಪೊಲೀಸ್ರಿಂದ ಮುಂದುವರೆದ ತನಿಖೆ ಮುಂದುವರೆದಿದೆ.
(ವರದಿ: ಗಂಗಾಧರ್ ನ್ಯೂಸ್ 18 ಕನ್ನಡ, ಬೆಂಗಳೂರು)
Bangalore,Karnataka













